ಹಗರಿಬೊಮ್ಮನಹಳ್ಳಿ: ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದ ಬೆನ್ನಲ್ಲೇ ಹಿಂದೂ ಕಾರ್ಯಕರ್ತರ ಮೇಲೆ ವಿವಿಧ ರೀತಿಯ ಆಕ್ರಮಣಗಳು ಹೆಚ್ಚಾಗಿವೆ. ಹಿಂದೂ ಕಾರ್ಯಕರ್ತರ ಮೇಲೆ ಸುಳ್ಳು ಕೇಸುಗಳನ್ನು ದಾಖಲಿಸಿ ಅವರಿಗೆ ಥಳಿಸುವುದು ಮತ್ತು ಭಯ ನಿರ್ಮಾಣ ಮಾಡುವ ಪ್ರಕ್ರಿಯೆ ನಡೆಯುತ್ತಿವೆ. ಜೈನ ಮುನಿ ಆಚಾರ್ಯ ಕಾಮಕುಮಾರ ನಂದಿ ಮಹಾರಾಜರು ಮತ್ತು ಯುವ ಬ್ರಿಗೇಡ್ ನ ವೇಣುಗೋಪಾಲ ಇವರ ಹತ್ಯೆ, ಸೇರಿದಂತೆ ಇನ್ನೂ ಹಲವಾರು ಘಟನೆಗಳು ಹಿಂದೂ ಸಮಾಜದಲ್ಲಿ ನಿರ್ಮಾಣ ಭಯದ ವಾತಾವರಣ ಮಾಡಿದೆ. ಅಷ್ಟೇ ಅಲ್ಲದೆ ಮೊನ್ನೆಯಷ್ಟೇ ಬೆಂಗಳೂರಿನಲ್ಲಿ ಪ್ರತಿ ರವಿವಾರ ನಡೆಯುತ್ತಿದ್ದ ನಾಗರಕಟ್ಟೆಯ ಪೂಜೆಗೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.
ಬಕ್ರೀದ್ ಸಮಯದಲ್ಲಿ ಬಾದಾಮಿ, ಎಲಬುಗಳನ್ನು ದೇವಸ್ಥಾನ, ಹಿಂದೂ ಶಿಕಾರಿಪುರ, ಶಿರಸಿ ಸೇರಿದಂತೆ ಹಲವೆಡೆ ಮನೆಗಳ ಎದುರು ಎಸೆದು ಕಾನೂನು ಅಕ್ರಮವಾಗಿ ಗೋಹತ್ಯೆ ಮಾಡಿ, ಗೋವಿನ ಸುವ್ಯವಸ್ಥೆಗೆ ಧಕ್ಕೆ ತಂದಿದ್ದಾರೆ. ಹಾಗಾಗಿ ಹಿಂದೂ ಕಾರ್ಯಕರ್ತರಿಗೆ. ಹಿಂದೂ ಧರ್ಮಕ್ಕೆ ಹೋರಾಟ ಮಾಡುವವರಿಗೆ ರಕ್ಷಣೆ ನೀಡಬೇಕು, ಹಿಂದೂಗಳ ಮೇಲೆ ಆಕ್ರಮಣ ಮಾಡುವವರ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಲು ರಾಜ್ಯ ಸರಕಾರ- ಕೈ ನಿರ್ದೇಶನ ನೀಡಬೇಕೆಂದು ಆಗ್ರಹಿಸಿ ಪಟ್ಟಣದಲ್ಲಿ ತಹಶೀಲ್ದಾರ ಮೂಲಕ ಮಾನ್ಯ ರಾಜ್ಯಪಾಲರಿಗೆ ಮನವಿಯನ್ನೂ ಸಲ್ಲಿಸಲಾಯಿತು,
ಈ ವೇಳೆ ವಕೀಲರಾದ ಚಂದ್ರಶೇಖರ, ಕೊಟ್ರೇಶ ಶೆಟ್ಟರ, ಚೆನ್ನಪ್ಪ ಒಡೆಯರ್, ತಾಲೂಕ ರೈತ ಸಂಘದ ಅಧ್ಯಕ್ಷರಾದ ರಮೇಶ ಕುಮಾರ, ಹಿಂದೂ ಮಹಾಗಣಪತಿ ಸಮಿತಿಯ ಚಿಂತ್ರಪಳ್ಳಿ ಸದಸ್ಯರಾದ ಸಮಾಜದ ನಾಗರಾಜ ಸದಸ್ಯರಾದ ಪ್ರಮೋದ, ದೀಪಕ್, ಶ್ರೀ.ಪರಶುರಾಮ ಹಿಂದೂ ಜನಜಾಗೃತಿ ಸಮಿತಿಯ ಸಂಗೀತಾ ಜನ್ನು, ದೊಡ್ಡಬಸಪ್ಪ ಮತ್ತು ಇತರ ಇತರ ಸದಸ್ಯರು ಉಸ್ಥಿತರಿದ್ದರು.

