ಹೊಸ ಜಿಲ್ಲೆಗೆ ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

Loading

ಬೆಂಗಳೂರು :ವಿಜಯನಗರ ನೂತನ ಜಿಲ್ಲಾಧಿಕಾರಿ ದಿವಾಕರ್ ಅವರು, ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್‌ ಖಾನ್ ಅವರನ್ನು ಬೆಂಗಳೂರಿನಲ್ಲಿ ಮಂಗಳವಾರ ಭೇಟಿ ಮಾಡಿ ಚರ್ಚಿಸಿದರು.

ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಿಗೆ ಸಚಿವರು ಶುಭ ಕೋರಿದರು.ಆ. 9 ರಿಂದ 15 ರವರೆಗೆ ಉಸ್ತುವಾರಿ ಸಚಿವರು ಜಿಲ್ಲಾ ಪ್ರವಾಸ ಮಾಡಲಿದ್ದು, ಪ್ರತಿ ತಾಲೂಕಿನಲ್ಲಿ ಕೆಡಿಪಿ ಸಭೆ ನಡೆಸಲಿದ್ದು ಆ.

9 ರಂದು ಹೊಸಪೇಟೆ ತಾಲೂಕು ಕೆಡಿಪಿ ಸಭೆ ನಿಗದಿಯಾಗಿದೆ.

ಈ ಮಧ್ಯೆ ವಿಧಾನಮಂಡಲ ಅಧಿವೇಶನ ನಡುವೆಯೇ ವಿಕಾಸಸೌಧದಲ್ಲಿ ವಿಜಯನಗರ ಜಿಲ್ಲೆಯ ಶಾಸಕರ ಸಭೆ ನಡೆಸಿ ನೂತನ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಕೋರಲು ತೀರ್ಮಾನಿಸಲಾಗಿದೆ.

Leave a Reply

Your email address will not be published. Required fields are marked *