ಬೆಂಗಳೂರು :ವಿಜಯನಗರ ನೂತನ ಜಿಲ್ಲಾಧಿಕಾರಿ ದಿವಾಕರ್ ಅವರು, ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಅವರನ್ನು ಬೆಂಗಳೂರಿನಲ್ಲಿ ಮಂಗಳವಾರ ಭೇಟಿ ಮಾಡಿ ಚರ್ಚಿಸಿದರು.
ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಿಗೆ ಸಚಿವರು ಶುಭ ಕೋರಿದರು.ಆ. 9 ರಿಂದ 15 ರವರೆಗೆ ಉಸ್ತುವಾರಿ ಸಚಿವರು ಜಿಲ್ಲಾ ಪ್ರವಾಸ ಮಾಡಲಿದ್ದು, ಪ್ರತಿ ತಾಲೂಕಿನಲ್ಲಿ ಕೆಡಿಪಿ ಸಭೆ ನಡೆಸಲಿದ್ದು ಆ.
9 ರಂದು ಹೊಸಪೇಟೆ ತಾಲೂಕು ಕೆಡಿಪಿ ಸಭೆ ನಿಗದಿಯಾಗಿದೆ.
ಈ ಮಧ್ಯೆ ವಿಧಾನಮಂಡಲ ಅಧಿವೇಶನ ನಡುವೆಯೇ ವಿಕಾಸಸೌಧದಲ್ಲಿ ವಿಜಯನಗರ ಜಿಲ್ಲೆಯ ಶಾಸಕರ ಸಭೆ ನಡೆಸಿ ನೂತನ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಕೋರಲು ತೀರ್ಮಾನಿಸಲಾಗಿದೆ.
