ಬೆಂಗಳೂರು :ಮೈಸೂರು ರಾಜ್ಯಕ್ಕೆ ‘ಕರ್ನಾಟಕ’ ಎಂದು ನಾಮಕರಣವಾಗಿ 2023ರ ನವೆಂಬರ್ 1ಕ್ಕೆ 50 ವರ್ಷಗಳು ಪೂರೈಸಿದ ನಿಮಿತ್ತ ‘ಹೆಸರಾಯಿತು ಕರ್ನಾಟಕ -50’ ಶೀರ್ಷಿಕೆಯಡಿ ವರ್ಷವಿಡೀ ಕನ್ನಡಪರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಕುರಿತು ಪೂರ್ವಭಾವಿಯಾಗಿ ದಿನಾಂಕ : 09/09/2023 ರಂದು ಬೆಳಗ್ಗೆ 11.00 ಗಂಟೆಗೆ ವಿಧಾನಸೌಧದ ಮೂರನೇ ಮಹಡಿಯಲ್ಲಿರುವ ಸಮ್ಮೇಳನ ಸಭಾಂಗಣದಲ್ಲಿ ಮಾನ್ಯ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರ ಅಧ್ಯಕ್ಷತೆಯಲ್ಲಿ ಬೆಂಗಳೂರು ವಿಭಾಗದ ಎಲ್ಲಾ ಸಾಹಿತಿ/ಕಲಾವಿದರೊಂದಿಗೆ ಸಭೆ ನಡೆಸಲಾಯಿತು. ಸದರಿ ಸಭೆಯಲ್ಲಿ ಮಾನ್ಯ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಶ್ರೀ ಶಿವರಾಜ ಎಸ್. ತಂಗಡಗಿ, ಮಾಜಿ ಸಚಿವರುಗಳಾದ ಶ್ರೀಮತಿ ಲೀಲಾದೇವಿ ಆರ್ ಪ್ರಸಾದ್, ಶ್ರೀಮತಿ ಬಿ.ಟಿ. ಲಲಿತಾ ನಾಯಕ್, ಶ್ರೀಮತಿ ಉಮಾಶ್ರೀ, ಶ್ರೀಮತಿ ಜಯಮಾಲಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರಾದ ಶ್ರೀ ವಿಶ್ವನಾಥ ಪಿ ಹಿರೇಮಠ ಕ.ಆ.ಸೇ., ನಾಡಿನ ಅನೇಕ ಹಿರಿಯ ಸಾಹಿತಿಗಳು, ಕಲಾವಿದರು, ಚಲನಚಿತ್ರ ರಂಗದ ಪ್ರಮುಖರು, ಇಲಾಖೆಯ ಹಿರಿಯ ಅಧಿಕಾರಿಗಳು ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದ್ದರು.
