ವಿಜಯನಗರ ಸಾಮ್ರಾಜ್ಯದ ಕೊನೆಯ ಕುಡಿ ಇನ್ನಿಲ್ಲ..!

Loading

ಗಂಗಾವತಿ : ವಿಶ್ವ ವಿಖ್ಯಾತ ವಿಜಯನಗರ ಸಾಮ್ರಾಜ್ಯದ ಅರವೀಡು ಮನೆತನದ ಕೊನೆಯ ಕುಡಿ, ಸತತ ಐದು ಬಾರಿ ಶಾಸಕರಾಗಿದ್ದ ಶ್ರೀರಂಗದೇವರಾಯಲು ಅವರು ಮಂಗಳವಾರ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿದ್ದು, ಇತ್ತೀಚಿನ ದಿನಗಳಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದರು. ಗಂಗಾವತಿಯ ಆನೆಗೊಂದಿ ರಸ್ತೆಯಲ್ಲಿರುವ ಅವರ ನಿವಾಸದಲ್ಲಿ ಕೊನೆಯ ದಿನಗಳನ್ನು ಕಳೆದಿದ್ದ ಅವರ ನಿಧನದಿಂದ ವಿಜಯನಗರ ಸಾಮ್ರಾಜ್ಯದ ಅರವೀಡು ವಂಶದ ಕುಡಿ ಅಂತ್ಯಗೊಂಡಂತಾಗಿದೆ. ಗುರುವಾರದಂದು ಆನೆಗೊಂದಿಯ ಪೆಟ್ರೋಲ್ ಬಂಕ್ ಪಕ್ಕದಲ್ಲಿರುವ ಅವರ ಗದ್ದೆಯಲ್ಲಿ ಅಂತ್ಯಸಂಸ್ಕಾರ ಜರುಗಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *