
ಹಗರಿಬೊಮ್ಮನಹಳ್ಳಿ: ಸಾರ್ವಜನಿಕರಿಗೆ ವೈಯಕ್ತಿಕ ಶೌಚಾಲಯ ನಿರ್ಮಿಸಲು ಸರ್ಕಾರ ಹಲವು ರೀತಿಯ ಸೌಲಭ್ಯಗಳನ್ನು ಕಲ್ಪಿಸಿದರು. ಬ್ಯಾಲಾಳ ಗ್ರಾಮದಲ್ಲಿ ಪುರುಷರು ಮತ್ತು ಮಹಿಳೆಯರು ಮಲಮೂತ್ರ ಎಸರ್ಜನೆಗೆ ಗ್ರಾಮದ ಹೊರ ಪ್ರದೇಶಗಳಿಗೆ ಹೋಗುತ್ತಿರುವುದು ವಿಷಾದನೀಯ ಎಂದು ಹಗರಿಬೊಮ್ಮನಹಳ್ಳಿಯ ಜೆಎಂಎಫ್ಸಿ ನ್ಯಾಯಾಲಯದ ನ್ಯಾಯಾಧೀಶರಾದ ಭಾಗ್ಯಲಕ್ಷ್ಮಿ ವಿಷಾದ ವ್ಯಕ್ತಪಡಿಸಿದರು.
ಶನಿವಾರದಂದು ತಾಲೂಕ ವಕೀಲರ ಸಂಘ ಕಾನೂನು ಸೇವಾ ಸಮಿತಿ ವಿವಿಧ ಇಲಾಖೆಯ ಗ್ರಾಮ ಪಂಚಾಯತಿ ಕಡಲಬಾಳು ಇವರುಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಕಾನೂನು ಅರಿವು ನೆರವು ಕಾರ್ಯಕ್ರಮ ಮತ್ತು ಸ್ವಚ್ಛತಾ ಹೀ ಸೇವಾ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ನ್ಯಾಯಾಧೀಶರು ಗ್ರಾಮದ ಸಾರ್ವಜನಿಕರು ಹಲವಾರು ರೀತಿಯ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಲು ನಾವು ವಾಸಿಸುವ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು ಆ ಮೂಲಕ ಪರಿಸರವನ್ನು ಸಂರಕ್ಷಿಸಬೇಕು.
ಶುದ್ಧವಾದ ಗಾಳಿ ಸ್ವಚ್ಛ ಪರಿಸರದಿಂದ ಆರೋಗ್ಯ ವನ್ನು ರಕ್ಷಿಸಿಕೊಳ್ಳಬೇಕಾಗಿದೆ ಎಂದ ಅವರು ಕಡಬಾಳು ಗ್ರಾಮ ಪಂಚಾಯತಿಯ ಅಧಿಕಾರಿಗಳು ಶೌಚಾಲಯ ನಿರ್ಮಿಸಿಕೊಳ್ಳುವ ಬಗ್ಗೆ ಸಾರ್ವಜನಿಕರಲ್ಲಿ ಹರಿವು ಮೂಡಿಸಿ ಬಹಿರ್ದಸೆ ಮುಕ್ತ ಗ್ರಾಮವನ್ನಾಗಿಸಬೇಕು ಎಂದರು.

ಈ ಸಂದರ್ಭದಲ್ಲಿ ವಕೀಲರ ಸಂಘದ ಅಧ್ಯಕ್ಷರಾದ ಪಿ ರಮೇಶ್ ತಾಲೂಕ ಪಂಚಾಯತಿ ಅಧಿಕಾರಿಗಳು ಗ್ರಾಮ ಪಂಚಾಯತಿ ಅಧಿಕಾರಿಗಳು ಗ್ರಾಮ ಪಂಚಾಯಿತಿಯ ಜನ ಪ್ರತಿನಿಧಿಗಳು ಆರೋಗ್ಯ ಸಿಬ್ಬಂದಿಗಳು ಆಶಾ ಕಾರ್ಯಕರ್ತೆಯರು ಗ್ರಾಮದ ನಾಗರಿಕರು ಇದ್ದರು.