
ಹಂಪಿ : ದಿನಾಂಕ: 02.11.2023 ರಂದು ಹಂಪಿಯಲ್ಲಿ ನಡೆದ “ಕರ್ನಾಟಕ ಸಂಭ್ರಮ-50” ರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾನ್ಯ ಮುಖ್ಯಮಂತ್ರಿಗಳು ಶ್ರೀ ಸಿದ್ದರಾಮಯ್ಯನವರು ಹಂಪಿಯ ಶ್ರೀ ವಿರೂಪಾಕ್ಷೇಶ್ವರ ಸ್ವಾಮಿಯ ದರ್ಶನ ಮತ್ತು ತಾಯಿ ಭುವನೇಶ್ವರಿ ದೇವಿಯ ದರ್ಶನ ಪಡೆದರು.

ಕಾರ್ಯಕ್ರಮ ಕ್ಕೆ ವಿವಿಧ ಕಲಾ ತಂಡಗಳು ಪಾಲ್ಗೊಂಡು ಮೆರವಣಿಗೆ ಮುಖಾಂತರ ಎದುರು ಬಸವಣ್ಣ ಮುಖ್ಯ ವೇದಿಕೆಗೆ ತಲುಪಿದರು.
ಮಾನ್ಯ ಮುಖ್ಯಮಂತ್ರಿಗಳು ಕನ್ನಡದ ಜ್ಯೋತಿಯನ್ನು ಬೆಳಗಿಸುವ ಮೂಲಕ ಕನ್ನಡ ರಥಯಾತ್ರೆಗೆ ಚಾಲನೆ ನೀಡಿದರು ಹಾಗೂ ಕಾರ್ಯಕ್ರಮಕ್ಕೆ ನಗಾರಿ ಬಾರಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರು, ಮಾನ್ಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು, ಹಾಗೂ ವಿವಿಧ ಇಲಾಖೆ ಸಚಿವರು, ಇಲಾಖೆಯ ಹಿರಿಯ ಅಧಿಕಾರಿಗಳು, ಮಾನ್ಯ ಶಾಸಕರು, ಇತರೆ ಗಣ್ಯಮಾನ್ಯರು ಹಾಗೂ ಮಾನ್ಯ ಜಿಲ್ಲಾಧಿಕಾರಿಗಳು, ಮಾನ್ಯ ಪೊಲೀಸ್ ವರಿಷ್ಠಾಧಿಕಾರಿಗಳು ವಿಜಯನಗರ ಜಿಲ್ಲೆ ಉಪಸ್ಥಿತರಿದ್ದರು,