
ವಿಜಯನಗರ(ಹೊಸಪೇಟೆ ): ಕೇಂದ್ರ ಸರ್ಕಾರದ ಜನಪ್ರಿಯ ಯೋಜನೆಗಳನ್ನು ಪ್ರತಿಯೊಬ್ಬರಿಗೂ ತಲುಪಿಸುವ ನಿಟ್ಟಿನಲ್ಲಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ವಿಕಸಿತ್ ಭಾರತ ಸಂಕಲ್ಪ ಯಾತ್ರ ಪ್ರಾರಂಭಗೊಂಡಿದ್ದು ವಿಜಯನಗರ ಜಿಲ್ಲೆಯಲ್ಲಿ ನಾಳೆ ದಿನಾಂಕ 27ರಂದು ವಿಶ್ವ ಪರಂಪರಾ ತಾಣವಾದ ಹಂಪಿ ಗ್ರಾಮ ಪಂಚಾಯಿತಿಯಿಂದ ಅಧಿಕೃತವಾಗಿ ಚಾಲನೆಗೊಳ್ಳಲಿದೆ ಎಂದು ಲೀಡ್ ಬ್ಯಾಂಕ್ ನ ವ್ಯವಸ್ಥಾಪಕರಾದ ಬಾಲಕೃಷ್ಣ ಭಟ್ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಬರುವ ಬಹುತೇಕ ಗ್ರಾಮ ಪಂಚಾಯಿತಿಗಳಲ್ಲಿ ವಿಕಿಸಿತ್ ಭಾರತ ಸಂಕಲ್ಪ ಯಾತ್ರ ಕಾರ್ಯಕ್ರಮ ಜರುಗಲಿದೆ. ನಾಳೆ ಬೆಳಿಗ್ಗೆ 10: 30 ನಿಮಿಷಕ್ಕೆ ಸೀತಾರಾಮ ತಾಂಡಾ ಗ್ರಾಮ ಪಂಚಾಯಿತಿ ಮತ್ತು ಸಂಜೆ ನಾಲ್ಕು ಗಂಟೆಗೆ ಹಂಪಿ ಗ್ರಾಮ ಪಂಚಾಯಿತಿಯಲ್ಲಿ ಕಾರ್ಯಕ್ರಮ ಅಧಿಕೃತವಾಗಿ ಚಾಲನೆಗೊಳ್ಳಲಿದೆ ಎಂದು ಬಾಲಕೃಷ್ಣ ಭಟ್ ಮಾಹಿತಿ ನೀಡಿದ್ದಾರೆ.