ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆ: ಮತಗಟ್ಟೆಗಳಿಗೆ ಚುನಾವಣಾ ವೀಕ್ಷಕರು, ಜಿಲ್ಲಾಧಿಕಾರಿಗಳ ಭೇಟಿ

Loading

ಹೊಸಪೇಟೆ (ವಿಜಯನಗರ) ಜೂನ್ 03 (ಕ.ವಾ): ಜಿಲ್ಲಾಧಿಕಾರಿಗಳಾದ ಎಂ.ಎಸ್.ದಿವಾಕರ ಅವರು ಜೂನ್ 3ರಂದು ಹೊಸಪೇಟೆ ನಗರದಲ್ಲಿನ ಚಿತ್ತವಾಡಗಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿನ ಮತಗಟ್ಟೆಗೆ ಭೇಟಿ ನೀಡಿದರು.


ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆಯ ವೀಕ್ಷಕರಾದ ಮಹೇಶ್ವರರಾವ್ ಅವರೊಂದಿಗೆ ಮತಗಟ್ಟೆಗೆ ತೆರಳಿದ ಜಿಲ್ಲಾಧಿಕಾರಿಗಳು, ಮತಗಟ್ಟೆಗಳಲ್ಲಿನ ವ್ಯವಸ್ಥೆಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಈ ಸಂದರ್ಭದಲ್ಲಿ ಸಹಾಯಕ ಆಯುಕ್ತರಾದ ಮೊಹಮದ್ ಅಲಿ ಅಕ್ರಂ ಷಾಹ, ತಹಸೀಲ್ದಾರರಾದ ಶ್ರುತಿ ಸೇರಿದಂತೆ ಇತರರು ಇದ್ದರು.


ಜಿಲ್ಲಾಧಿಕಾರಿಗಳಿಂದ ಮತದಾನ: ಇದೆ ವೇಳೆ ಜಿಲ್ಲಾಧಿಕಾರಿಗಳು, ಚಿತ್ತವಾಡಗಿಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿನ ಮತಗಟ್ಟೆಯಲ್ಲಿ ಮತದಾನ ಮಾಡಿದರು.

Leave a Reply

Your email address will not be published. Required fields are marked *