ಹೊಸಪೇಟೆ (ವಿಜಯನಗರ) : ಡಿವಿಜನಲ್ ರಿಟೇಲ್ ಸೇಲ್ಸ್ ಹೇಡ್, ಇಂಡಿಯನ್ ಆಯಿಲ್ ಕಾರ್ಪೋರೇಶನ್ ಲಿಮಿಟೆಡ್ ಬಳ್ಳಾರಿ (Divisional Retail Sales Head, Indian Oil Corporation Limited, Bellary) ಇವರು ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ತಂಬ್ರಹಳ್ಳಿ ಹೋಬಳಿ ಮರಬ್ಬೀಹಾಳು ಗ್ರಾಮದ ಸರ್ವೆ ನಂಬರ್ 307/0/9 ರಲ್ಲಿ ಪೆಟ್ರೋಲಿಯಂ ರಿಟೈಲ್ ಜೌಟಲೇಟ್ ಸ್ಥಾಪನೆ ಮಾಡಲು ನಿರಪೇಕ್ಷಣಾ ಪ್ರಮಾಣ ಪತ್ರ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿರುತ್ತಾರೆ.
ಈ ಕಂಪನಿಯವರು ಅರ್ಜಿದಾರರಾದ ಶ್ರೀ ಆದರ್ಶ್ ಎಲ್.ತಂದೆ ಪರಮೇಶ್ವರ ಎಲ್ ಇವರನ್ನು ಫ್ರಾಂಚೈಸ್ಸಿಯನ್ನಾಗಿ ನೇಮಕ ಮಾಡಿಕೊಂಡಿರುತ್ತಾರೆ. ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ತಂಬ್ರಹಳ್ಳಿ ಹೋಬಳಿ ಮರಬ್ಬೀಹಾಳು ಗ್ರಾಮದ ಸರ್ವೆ ನಂಬರ್ 307/0/9 ರಲ್ಲಿ ಪೆಟ್ರೋಲಿಯಂ ರಿಟೈಲ್ ಜೌಟಲೇಟ್ ಸ್ಥಾಪನೆ ಮಾಡಲು ನಿರಪೇಕ್ಷಣಾ ಪ್ರಮಾಣ ಪತ್ರ ನೀಡುವ ಕುರಿತಂತೆ ಸಾರ್ವಜನಿಕರಿಂದ ಆಕ್ಷೇಪಣೆಗಳು ಇದ್ದಲ್ಲಿ ಈ ಪ್ರಕಟಣೆ ಪ್ರಕಟಿಸಿದ ದಿನಾಂಕದಿAದ 10 ದಿನದೊಳಗಾಗಿ ಆಕ್ಷೇಪಣೆಯನ್ನು ಜಿಲ್ಲಾಧಿಕಾರಿಗಳ ಕಾರ್ಯಾಲಯದ ಇಮೇಲ್ ಐಡಿ: vijayanagaradc@gmail.comಗೆ ಹಾಗೂ ನೇರವಾಗಿ ವಿಜಯನಗರ ಜಿಲ್ಲೆಯ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಎಂಎಜಿ-2 ಶಾಖೆಗೆ ಸಲ್ಲಿಸಲು ಈ ಮೂಲಕ ಸಾರ್ವಜನಿಕರಲ್ಲಿ ತಿಳಿಯಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.