ಜಿಲ್ಲಾಮಟ್ಟದ ಸಪಾಯಿ ಕರ್ಮಚಾರಿಗಳ ಜಾಗೃತಿ ಸಮಿತಿ ಸಭೆ ಪೌರಕಾರ್ಮಿಕರಿಗೆ ನಿಯಮಿತವಾಗಿ ಆರೋಗ್ಯ ತಪಾಸಣೆ ನಡೆಸಬೇಕು: ಎಂ.ಎಸ್.ದಿವಾಕರ

Loading

ಹೊಸಪೇಟೆ (ವಿಜಯನಗರ): ಜಿಲ್ಲಾಮಟ್ಟದ ಸಪಾಯಿ ಕರ್ಮಚಾರಿಗಳ ಜಾಗೃತಿ ಸಮಿತಿ ಸಭೆಯು ಜಿಲ್ಲಾಧಿಕಾರಿಗಳಾದ ಎಂ.ಎಸ್.ದಿವಾಕರ ಅವರ ಅಧ್ಯಕ್ಷತೆಯಲ್ಲಿ ಜೂನ್ 12ರಂದು ನಡೆಯಿತು.
ಪೌರ ಕಾರ್ಮಿಕರಿಗೆ ನೀಡುತ್ತಿರುವ ಕನಿಷ್ಠ ವೇತನ, ಪೌರ ಕಾರ್ಮಿಕರ ಖಾಯಂ ನೇಮಕಾತಿ, ಪೌರ ಕಾರ್ಮಿಕರಿಗೆ ವಸತಿ ಸೌಲಭ್ಯ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ನಿಗಮದ ವಿವಿಧ ಯೋಜನೆಗಳ ಅನುಷ್ಠಾನ ಸೇರಿದಂತೆ ನಾನಾ ವಿಷಯಗಳ ಬಗ್ಗೆ ಅಧಿಕಾರಿಗಳಿಂದ ಜಿಲ್ಲಾಧಿಕಾರಿಗಳು ಮಾಹಿತಿ ಪಡೆದುಕೊಂಡರು.


ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿಗಳು, ಪೌರ ಕಾರ್ಮಿಕರಿಗೆ ಪ್ರತಿದಿನ ಸುರಕ್ಷತಾ ಪರಿಕರಗಳನ್ನು ವಿತರಿಸಬೇಕು ಮತ್ತು ಅವುಗಳನ್ನು ಧರಿಸಿಕೊಂಡು ಕೆಲಸ ನಿರ್ವಹಿಸುತ್ತಿರುವುದರ ಬಗ್ಗೆ ಪರಿಶೀಲಿಸಬೇಕು. ಪೌರಕಾರ್ಮಿಕರಿಗೆ ಪ್ರತಿ ಮೂರು ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆ ಮತ್ತು ಮಾಸ್ಟರ್ ಚೆಕ್‌ಪ್‌ನ್ನು ನಿಯಮಿತವಾಗಿ ಮಾಡಿಸಬೇಕು ಎಂದು ಎಲ್ಲಾ ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.


ಪೌರಕಾರ್ಮಿಕರಿಗೆ ಗೃಹಭಾಗ್ಯ ಯೋಜನೆಯಡಿ ವಸತಿ ಸೌಲಭ್ಯ ಕಲ್ಪಿಸುವುದರ ಬಗ್ಗೆ ನಿಯಮಾನುಸಾರ ಪರಿಶೀಲಿಸಬೇಕು. ಪೌರಕಾರ್ಮಿಕರಿಗೆ ಶೇ.24.10 ಮತ್ತು ಶೇ.20 ಅನುದಾನವನ್ನು ಮೀಸಲಿಟ್ಟಿದ್ದು ಸರ್ಕಾರಿ ಆದೇಶದನ್ವಯ ಅನುದಾನ ಉಪಯೋಗಿಸಬೇಕು. ಪೌರಕಾರ್ಮಿಕರಿಗೆ ಇಎಸ್‌ಐ ಮತ್ತು ಪಿಎಫ್ ಮೊತ್ತವನ್ನು ಪಾವತಿಯ ಬಗ್ಗೆ ಹಾಗೂ ಪ್ರತಿ ಮಾಹೆ ವೇತನ ಚೀಟಿ ನೀಡುವ ಕಾರ್ಯ ಅಚ್ಚುಕಟ್ಟಾಗಿ ನಡೆಯಬೇಕು. ನಗರ ಸÀ್ಥಳೀಯ ಸಂಸ್ಥೆ ಮತ್ತು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸಾರ್ವಜನಿಕ ಶೌಚಾಲಯಗಳನ್ನು ಉತ್ತಮ ರೀತಿಯಲ್ಲಿ ನಿರ್ವಹಣೆ ಮಾಡಬೇಕು. ನಗರ ಸಭೆ, ಪುರಸಭೆ, ಪಟ್ಟಣ ಪಂಚಾಯತಿ ಪೌರ ಕಾರ್ಮಿಕರಿಗೆ ವಿಶ್ರಾಂತಿ ಗೃಹ ನಿರ್ಮಾಣದ ಬೇಡಿಕೆಗಳ ಬಗ್ಗೆ ಪರಿಶೀಲಿಸಿ ಕ್ರಮ ವಹಿಸಬೇಕು. ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ದಿ ನಿಗಮದಿಂದ ಸಫಾಯಿ ಕರ್ಮಚಾರಿಗಳಿಗೆ ಸೌಲಭ್ಯಗಳು ಕಾಲಮಿತಿಯೊಳಗೆ ಸಿಗುವಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಹೊಸಪೇಟೆ ನಗರ ಸಭೆಯಿಂದ ಸಫಾಯಿ ಕರ್ಮಚಾರಿಗಳಿಗೆ ನಿವೇಶನ ವಸತಿ ಸೌಲಭ್ಯ ಕಲ್ಪಿಸಲಾಗಿದೆ.

ಹರಪನಹಳ್ಳಿಯಲ್ಲಿ ಪೌರಕಾರ್ಮಿಕರಿಗೆ ಆರೋಗ್ಯ ತಪಾಸಣೆಯನ್ನು 03 ತಿಂಗಳಿಗೊಮ್ಮೆ ಮಾಡಿಸುತ್ತಿದ್ದು, ಮಾಸ್ಟರ್ ಹೆಲ್ತ್ ಚೆಕ್ ಅಪ್‌ಗಾಗಿ 2023-24ನೇ ಸಾಲಿನ ಶೇ.24.10ರ ಕ್ರಿಯಾ ಯೋಜನೆಯಲ್ಲಿ ಕಾಯ್ದಿರಿಸಿದೆ. ಹಗರಿಬೊಮ್ಮನಹಳ್ಳಿಯ ಪುರಸಭೆಯಿಂದ 24 ಜನ ಪೌರಕಾರ್ಮಿಕರಿಗೆ ಗೃಹಭಾಗ್ಯ ಯೋಜನೆಯಡಿ ವಸತಿ ಸೌಲಭ್ಯ ಹಾಗೂ 19 ಜನ ಪೌರಕಾರ್ಮಿಕರಿಗೆ ನಿವೇಶನ ಮಂಜೂರು ಮಾಡಲಾಗಿದೆ. ಹೂವಿನಹಡಗಲಿ ಪುರಸಭೆಯಿಂದ 12 ಜನ ಪೌರಕಾರ್ಮಿಕರಿಗೆ ಗೃಹಭಾಗ್ಯ ಯೋಜನೆಯಡಿ ವಸತಿ ಕಲ್ಪಿಸಲಾಗಿದೆ. ಕಮಲಾಪುರ ಪುರಸಭೆಯಲ್ಲಿ 41 ಜನ ಪೌರಕಾರ್ಮಿಕರಿದ್ದು, ಈಗಾಗಲೇ 20 ಜನ ಪೌರಕಾರ್ಮಿಕರಿಗೆ ಸರ್ವೇ ನಂ:672/2 ರಲ್ಲಿ ನಿವೇಶನ ಹಂಚಿಕೆ ಮಾಡಲು ರಾಜೀವ್ ಗಾಂಧಿ ನಿಗಮದಿಂದ ಹಕ್ಕು ಪತ್ರ ವಿತರಣೆ ಮಾಡಲಾಗಿದೆ.

ಹೊಸದಾಗಿ ಖಾಯಂ ಆದ 21 ಜನ ಪೌರಕಾರ್ಮಿಕರಿಗೆ ಸರ್ವೇ ನಂಬರ್:672/2 ರಲ್ಲಿ ಬಾಕಿ ಉಳಿದ ಜಮೀನನ್ನು ಗುರುತಿಸಿದ್ದು ನಿವೇಶನ ಹಂಚಿಕೆ ಮಾಡಲು ಕ್ರಮವಹಿಸಲಾಗುವುದು. ಕೂಡ್ಲಿಗಿ ಪಟ್ಟಣ ಪಂಚಾಯತಿಯಿAದ ಸರ್ವೇ ನಂಬರ್ 206ಎ/4 ರಲ್ಲಿ ಒಟ್ಟು 45 ನಿವೇಶನಗಳನ್ನು ರಚನೆ ಮಾಡಿದ್ದು ಈ ನಿವೇಶನಗಳನ್ನು ಎಲ್ಲಾ ಪೌರ ಕಾರ್ಮಿಕರಿಗೆ ಹಂಚಿಕೆ ಮಾಡಲಾಗಿದೆ. ಪಿಕೆಜಿಬಿವೈ ಖಾಯಂ ಯೋಜನೆ ಅಡಿಯಲ್ಲಿ 26 ಮನೆ ಮಂಜೂರಾಗಿದ್ದು, ಇದರಲ್ಲಿ 22 ಮನೆಗಳು ಸಂಪೂರ್ಣವಾಗಿದ್ದು ಬಾಕಿ ಮನೆಗಳು ಮುಕ್ತಾಯ ಹಂತದಲ್ಲಿದೆ. ಕೊಟ್ಟೂರು ಪಟ್ಟಣ ಪಂಚಾಯತಿಯಿAದ ಒಟ್ಟು 33 ಪೌರಕಾರ್ಮಿಕರಲ್ಲಿ 14 ಜನ ಪೌರಕಾರ್ಮಿಕರಿಗೆ ಈಗಾಗಲೇ ಗೃಹಭಾಗ್ಯ ಯೋಜನೆಯ ಸೌಲಭ್ಯ ಪಡೆದಿರುತ್ತಾರೆ. ಪ್ರಸ್ತುತ 2 ಪೌರಕಾರ್ಮಿಕರ ಮಂಜೂರಾತಿ ಪ್ರಸ್ತಾವನೆಯನ್ನು ಜಿಲ್ಲಾಧಿಕಾರಿಗಳ ಕಚೇರಿಗೆ ಸಲ್ಲಿಸಿದೆ. ಬಾಕಿ ಉಳಿದ 17 ಪೌರಕಾರ್ಮಿಕರು ನಿವೇಶನ ರಹಿತರಾಗಿರುತ್ತಾರೆ. ಮರಿಯಮ್ಮನಹಳ್ಳಿ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ 04 ಜನ ಪೌರಕಾರ್ಮಿಕರಿಗೆ ಗೃಹಭಾಗ್ಯ ಯೋಜನೆಯಡಿ ವಸತಿ ಸೌಲಭ್ಯ ಹಾಗೂ 04 ಜನ ಪೌರಕಾರ್ಮಿಕರಿಗೆ ನಿವೇಶನ ಮಂಜೂರು ಮಾಡಲಾಗಿರುತ್ತದೆ ಎಂದು ಆಯಾ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.


ಪËರಕಾರ್ಮಿಕರಿಗೆ ಸುರಕ್ಷಿತ ಪರಿಕರಗಳನ್ನು ಖರೀದಿಸಿ ವಿತರಿಸಲಾಗಿದ್ದು, ಅವುಗಳನ್ನು ಧರಿಸಿಕೊಂಡು ಕೆಲಸ ನಿರ್ವಹಿಸಲು ಪೌರಕಾರ್ಮಿಕರಿಗೆ ಸೂಚಿಸಲಾಗಿದ್ದು, ಕಡ್ಡಾಯವಾಗಿ ಸುರಕ್ಷಿತ ಧಿರಿಸುಗಳನ್ನು ಧರಿಸಿ ಕೆಲಸ ನಿರ್ವಹಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಮರಿಯಮ್ಮನಹಳ್ಳಿ ಪಟ್ಟಣ ಪಂಚಾಯತಿಯಿAದ ಪËರಕಾರ್ಮಿಕರಿಗೆ ವಿಶ್ರಾಂತಿಗಾಗಿ ಪಟ್ಟಣ ಪಂಚಾಯತಿ ಕಟ್ಟಡದಲ್ಲಿ ವಿಶ್ರಾಂತಿ ಕಟ್ಟಡ ನಿರ್ಮಿಸಲು ಕ್ರಮಕೈಗೊಳ್ಳಲಾಗಿದೆ. ಕಮಲಾಪುರ ಪುರಸಭೆ ವ್ಯಾಪ್ತಿಯಲ್ಲಿ ಹೊಸ ಕಟ್ಟಡ ನಿರ್ಮಾಣವಾಗುತ್ತಿದ್ದು ಅದರಲ್ಲಿ ವಿಶ್ರಾಂತಿ ಗೃಹ ನಿರ್ಮಾಣ ವ್ಯವಸ್ಥೆ ಮಾಡಲಾಗುವುದು. ಹೂವಿನಹಡಗಲಿ ಪುರಸಭೆ ವ್ಯಾಪ್ತಿಯಲ್ಲಿ ಹೊಸ ಕಟ್ಟಡ ನಿರ್ಮಾಣವಾಗುತ್ತಿದ್ದು ಅದರಲ್ಲಿ ವಿಶ್ರಾಂತಿ ಕಟ್ಟಡ ನಿರ್ಮಿಸಲು ಕ್ರಮಕೈಗೊಳ್ಳಲಾಗಿದೆ.

ಹೊಸಪೇಟೆ ನಗರಸಭೆ ವ್ಯಾಪ್ತಿಯಲ್ಲಿ 70 ಶೌಚಾಲಯಗಳನ್ನು ನಿರ್ವಹಣೆಗಾಗಿ ಹೊರಗುತ್ತಿಗೆ ಏಜೇನ್ಸಿಯವರಿಗೆ ನೀಡಿದ್ದು, ಪ್ರತಿದಿನ ಸ್ವಚ್ಛತೆಯ ಬಗ್ಗೆ ನಗರಸಭೆಯಿಂದ ತಪಾಸಣೆ ನಡೆಸಲಾಗುತ್ತಿದ್ದು ಉತ್ತಮ ರೀತಿಯಲ್ಲಿ ನಿರ್ವಹಣೆ ಮಾಡಲಾಗುತ್ತಿದೆ. ಮರಿಯಮ್ಮನಹಳ್ಳಿ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ 01 ಸಾರ್ವಜನಿಕ ಶೌಚಾಲಯ ಹಾಗೂ 7 ಸಮುದಾಯ ಶೌಚಾಲಯಗಳನ್ನು, ಹಗರಿಬೊಮ್ಮನಹಳ್ಳಿಯಲ್ಲಿ 2 ಸಾರ್ವಜನಿಕ ಶೌಚಾಲಯ ಹಾಗೂ 7 ಸಮುದಾಯ ಶೌಚಾಲಯಗಳನ್ನು, ಹೂವಿನಹಡಗಲಿಯಲ್ಲಿ 2 ಸಾರ್ವಜನಿಕ ಶೌಚಾಲಯ ಹಾಗೂ 7 ಸಮುದಾಯ ಶೌಚಾಲಯಗಳನ್ನು, ಕಮಲಾಪುರ ಪುರಸಭೆ ವ್ಯಾಪ್ತಿಯಲ್ಲಿ 02 ಸಾರ್ವಜನಿಕ ಶೌಚಾಲಯಗಳನ್ನು, ಕೂಡ್ಲಿಗಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿನ ಸಾರ್ವಜನಿಕ ಶೌಚಾಲಯಗಳನ್ನು ಉತ್ತಮ ರೀತಿಯಲ್ಲಿ ನಿರ್ವಹಣೆ ಮಾಡಲಾಗುತ್ತಿದೆ. ಕೊಟ್ಟೂರು ಪಟ್ಟಣದಲ್ಲಿನ 1 ಸಾರ್ವಜನಿಕ ಶೌಚಾಲಯವನ್ನು ಕೆ.ಎಸ್.ಆರ್.ಟಿ.ಸಿ ಇಲಾಖೆಯವರು ನಿರ್ವಹಣೆ ಮಾಡಲಾಗುತ್ತಿದ್ದು ಪಟ್ಟಣ ಪಂಚಾಯತಿಯಿAದ ನಿಯಮಿತವಾಗಿ ಪರಿಶೀಲನೆ ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದರು.


ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ದಿ ನಿಗಮದಿಂದ ಸಫಾಯಿ ಕರ್ಮಚಾರಿಗಳಿಗೆ ನಾನಾ ಸೌಲಭ್ಯ ನೀಡಲಾಗಿದೆ. ಹೂವಿನಹಡಗಲಿಯ ಪುರಸಭೆಯಲ್ಲಿ 12 ಜನ ಪೌರಕಾರ್ಮಿಕರಿಗೆ 50,000 ಸಹಾಯ ಧನ ಮಂಜೂರಾಗಿದೆ. ಮತ್ತು ಪೌರ ಕಾರ್ಮಿಕರ 25 ಮಕ್ಕಳಿಗೆ ಟ್ಯಾಬ್ ವಿತರಿಸಲಾಗಿದೆ. ಹಗರಿಬೊಮ್ಮನಹಳ್ಳಿ ಪುರಸಭೆಯಿಂದ 07 ಜನ ಪೌರ ಕಾರ್ಮಿಕರ ಮಕ್ಕಳಿಗೆ ಟ್ಯಾಬ್ ಮಂಜೂರು ಮಾಡಲಾಗಿದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.


ಸಭೆಯಲ್ಲಿ ವಿವಿಧ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು, ವಿವಿಧ ನಿಗಮಗಳ ಜಿಲ್ಲಾ ವ್ಯವಸ್ಥಾಪಕರು ಮತ್ತು ಇನ್ನೀತರ ಅಧಿಕಾರಿಗಳು ಇದ್ದರು.

Leave a Reply

Your email address will not be published. Required fields are marked *