ಹೊಸಪೇಟೆ (ವಿಜಯನಗರ): 2024-25ನೇ ಶೈಕ್ಷಣಿಕ ಸಾಲಿನ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಗೆ ವೃತ್ತಿ ತರಬೇತಿ ನೀಡಲು ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ವಿಜಯನಗರ ಜಿಲ್ಲೆಯ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ವ್ಯಾಪ್ತಿಗೆ ಬರುವ ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಗೆ 2024-25ನೇ ಸಾಲಿಗೆ ಆಡಳಿತ ನ್ಯಾಯಾಧೀಕರಣದಲ್ಲಿ 2 ವರ್ಷಗಳ ವೃತ್ತಿ ತರಬೇತಿಯನ್ನು ನೀಡಲಾಗುವುದು. ಆದ್ದರಿಂದ ಅರ್ಹ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಜೂನ್ 18 ರಿಂದ ಜುಲೈ 31ರವರೆಗೆ ಸಲ್ಲಿಸಬಹುದಾಗಿದೆ.
ಈ ತರಬೇತಿಯನ್ನು ಪಡೆಯಲು ಇಚ್ಛಿಸುವ ಅಭ್ಯರ್ಥಿಗಳು ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು., ತಂದೆ, ತಾಯಿ, ಪೋಷಕರ ವಾರ್ಷಿಕ ಆದಾಯ ರೂ.2.50 ಲಕ್ಷಕ್ಕಿಂತ ಹೆಚ್ಚಿರಬಾರದು., ವಿಜಯನಗರ ಜಿಲ್ಲೆಗೆ ಮಾತ್ರ ಸಂಬAಧಿಸಿದ ಹಾಗೂ ವಕೀಲ ವೃತ್ತಿ ನಡೆಸಲು ಅರ್ಹತೆಯುಳ್ಳ ಕಾನೂನು ಪದವೀಧರರು ಮಾತ್ರ ಈ ತರಬೇತಿಗೆ ಅರ್ಹರಾಗಿರುತ್ತಾರೆ., ಅರ್ಜಿಗಳನ್ನು ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕಕ್ಕೆ 2 ವರ್ಷದೊಳಗೆ ಕಾನೂನು ಪದವಿಯನ್ನು ಪಡೆದಿರಬೇಕು., ಅಭ್ಯರ್ಥಿಯ ವಯಸ್ಸು, ಅರ್ಜಿಗಳನ್ನು ಸಲ್ಲಿಸುವ ಮುನ್ನ 40 ವರ್ಷಗಳನ್ನು ಮೀರಿರಬಾರದು., ಈಗಾಗಲೇ ಕಾನೂನು ವಿಷಯದಲ್ಲಿ ತರಬೇತಿ ಪಡೆದಿರಬಾರದು., ಅಭ್ಯರ್ಥಿಯು ಕಾನೂನು ಪದವಿಯಲ್ಲಿ ಉತ್ತೀರ್ಣರಾದ 02 ವರ್ಷಗಳೊಳಗೆ ಕರ್ನಾಟಕ ಬಾರ್ ಅಸೋಸಿಯೇಷನ್ನಲ್ಲಿ ನೋಂದಣಿ ಮಾಡಿಸಿರಬೇಕು.
ಆಭ್ಯರ್ಥಿಗಳು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವೆಬ್ಸೈಟ್ ತಿತಿತಿ.ಣತಿ.ಞಚಿಡಿ.ಟಿiಛಿ.iಟಿಗೆ ಭೇಟಿ ನೀಡಿ, ಅರ್ಜಿಗಳು/ ಂಠಿಠಿಟiಛಿಚಿಣioಟಿs ಲಿಂಕ್ ಮೂಲಕ ಅರ್ಜಿ ಸಲ್ಲಿಸಿಲ್ಲಿಸಬಹುದು ಎಂದು ವಿಜಯನಗರ ಜಿಲ್ಲೆಯ ಕಾನೂನು ಪದವೀಧರರ ನ್ಯಾಯಾಂಗ ಆಡಳಿತ ತರಬೇತಿ ಆಯ್ಕೆ ಸಮಿತಿ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಹಾಗೂ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.