ಅಂತಾರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ, ಕಳ್ಳಸಾಗಾಣಿಕೆ ವಿರೋಧಿ ಸಪ್ತಾಹ ದಿನಾಚರಣೆ

Loading

ಹೊಸಪೇಟೆ (ವಿಜಯನಗರ) : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿಗಳ ಕಚೇರಿ, ಪೊಲೀಸ್ ಇಲಾಖೆ, ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯ, ಸಪ್ತಗಿರಿ ಗ್ರೂಪ್ ಆಪ್ ಇನ್ಸಿಟೂಷನ್ ನರ್ಸಿಂಗ್ ಕಾಲೇಜ್, ಮಲ್ಲಿಗೆ ಪ್ಯಾರಾಮೆಡಿಕಲ್ ಕಾಲೇಜ್, ದೀಪಾಲಿ ಪ್ಯಾರಾಮೆಡಿಕಲ್ ಮತ್ತು ನರ್ಸಿಂಗ್ ಕಾಲೇಜ್, ವಿಜಯನಗರ ಮಹಾವಿದ್ಯಾಲಯ ಇವರ ಸಂಯುಕ್ತಾಶ್ರಯದಲ್ಲಿ ಜೂ.26ರಂದು ಅಂತಾರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಮತ್ತು ಕಳ್ಳ ಸಾಗಾಣಿಕೆ ವಿರೋಧಿ ಸಪ್ತಾಹ ದಿನಾಚರಣೆ ಹಾಗೂ ಜನ ಜಾಗೃತಿ ಜಾಥಾ ಕಾರ್ಯಕ್ರಮವು ವಿಜಯನಗರ ಜಿಲ್ಲೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಆವರಣದಲ್ಲಿ ಜೂನ್ 26ರಂದು ಬೆಳಗ್ಗೆ 10 ಗಂಟೆಗೆ ಹಮ್ಮಿಕೊಳ್ಳಲಾಗಿದೆ.

ಜಾಥಾಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಬಿ.ಎಲ್. ಶ್ರೀಹರಿಬಾಬು ಅವರು ಚಾಲನೆ ನೀಡುವರು. ಮುಖ್ಯ ಅತಿಥಿಗಳಾಗಿ ಹೊಸಪೇಟೆಯ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯದ ಕುಮಾರಿ ಮಾನಸ ಅಕ್ಕ ಅವರು ಆಗಮಿಸುವರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ.ಶಂಕರ್ ನಾಯ್ಕ್ ಎಲ್ ಅಧ್ಯಕ್ಷತೆ ವಹಿಸುವರು.

ಜಿಲ್ಲಾ ಕುಷ್ಠರೋಗ ನಿರ್ಮಾಲನಾಧಿಕಾರಿ ಡಾ.ರಾಧಿಕಾ ಕೆ ಪ್ರಾಸ್ತಾವಿಕ ಮಾತನಾಡುವರು. ಅತಿಥಿಗಳಾಗಿ ಜಿಲ್ಲಾ ಆರ್.ಸಿ.ಹೆಚ್.ಅಧಿಕಾರಿ ಡಾ.ಜಂಬಯ್ಯ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿ ಡಾ.ಕಮಲಮ್ಮ, ಜಿಲ್ಲಾ ಕುಟುಂಬ ಕಲ್ಯಾಣ ಕಾರ್ಯಕ್ರಮ ಅನುಷ್ಠಾನ ಅಧಿಕಾರಿ ಡಾ.ವಿನಯ್, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಜಗದೀಶ ಪಾಟ್ನೆ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಷಣ್ಮುಖ ನಾಯ್ಕ್, ತಾಲೂಕು ಆರೋಗ್ಯಾಧಿಕಾರಿ ಡಾ.ಭಾಸ್ಕರ್ ಡಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ದೊಡ್ಡಮನಿ ಎಂ.ಪಿ., ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಹಾಗೂ ಸಮಾಜ ಕಾರ್ಯಕರ್ತರಾದ ಮಾರೇಶ್ ಜಿ ಉಪಸ್ಥಿತರಿರುವರು ಎಂದು ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅಧಿಕಾರಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *