ಹೊಸಪೇಟೆ (ವಿಜಯನಗರ) : ವಿಜಯನಗರ ಜಿಲ್ಲೆಯ ಹೂವಿನಹಡಗಲಿಯಲ್ಲಿನ ಪುರಾತತ್ವ, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯ ಸರ್ಕಾರಿ ವಸ್ತು ಸಂಗ್ರಹಾಲಯದ ಕಟ್ಟಡದ ಅಭಿವೃದ್ಧಿ ಕಾಮಗಾರಿಯು ಪ್ರಗತಿಯಲ್ಲಿರುವುದರಿಂದ ಸಾರ್ವಜನಿಕರ ಹಿತದೃಷ್ಠಿಯಿಂದ ಈ ವಸ್ತು ಸಂಗ್ರಹಾಲಯವನ್ನು ಸಾರ್ವಜನಿಕರ/ಪ್ರವಾಸಿಗರ ವೀಕ್ಷಣೆಗಾಗಿ ಪ್ರವೇಶ ನಿರ್ಬಂಧಿಸಲು ಮೈಸೂರಿನ ಪುರಾತತ್ವ, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯ ಆಯುಕ್ತರು ಆದೇಶಿಸಿದ್ದಾರೆ.
ಆದ್ದರಿಂದ ಜೂನ್ 28ರಿಂದ ಜಾರಿಗೆ ಬರುವಂತೆ ಹೂವಿನಹಡಗಲಿಯಲ್ಲಿನ ಸರ್ಕಾರಿ ವಸ್ತು ಸಂಗ್ರಹಾಲಯವನ್ನು ಸಾರ್ವಜನಿಕರ ಪ್ರವಾಸಿಗರ ವೀಕ್ಷಣೆಗಾಗಿ ಪ್ರವೇಶವನ್ನು ಮುಂದಿನ ಆದೇಶದವರೆಗೆ ನಿರ್ಬಂಧಿಸಲಾಗಿದೆ ಎಂದು ಸರ್ಕಾರಿ ವಸ್ತು ಸಂಗ್ರಹಾಲಯದ ಮೇಲ್ವಿಚಾರಕರಾದ ಡಾ.ಆರ್. ಮಂಜನಾಯ್ಕ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.