ಜೂನ್ 28ರಂದು ಲಾರ್ವಾ ಉತ್ಪತ್ತಿ ತಾಣ ನಾಶ ಚಟುವಟಿಕೆಗೆ – ಜಿಪಂ ಸಿಇಓ ಅವರಿಂದ ಚಾಲನೆ

Loading

ಹೊಸಪೇಟೆ (ವಿಜಯನಗರ) : ಡೆಂಗಿ ಜ್ವರ ನಿಯಂತ್ರಣಕ್ಕೆ ಸಂಬAಧಿಸಿದAತೆ ಪ್ರತಿ ಶುಕ್ರವಾರ ಈಡಿಸ್ ಲಾರ್ವಾ ಉತ್ಪತ್ತಿ ತಾಣಗಳನ್ನು ನಾಶ ಪಡಿಸುವ ಚಟುವಟಿಕೆಗೆ ಜೂನ್ 28ರಂದು ರಾಜ್ಯಾದ್ಯಂತ ಏಕಕಾಲದಲ್ಲಿ ಚಾಲನೆ ಸಿಗಲಿದ್ದು, ಅದರಂತೆ ವಿಜಯನಗರ ಜಿಲ್ಲೆಯಲ್ಲಿಯು ಸಹ ಈ ಕಾರ್ಯಕ್ರಮಕ್ಕೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಸದಾಶಿವ ಪ್ರಭು ಬಿ ಅವರು ನಗರದ 100 ಹಾಸಿಗೆಯ ಸರಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಬೆಳಗ್ಗೆ 9.15ಕ್ಕೆ ಚಾಲನೆ ನೀಡಲಿದ್ದಾರೆ.

ಪ್ರಸ್ತುತ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಡೆಂಗಿ ಜ್ವರ ಪ್ರಕರಣಗಳು ಏರಿಕೆಯಾಗಿದ್ದು, ಪ್ರಸಕ್ತ ಮಳೆಗಾಲ ಹಾಗೂ ನಂತರದ ದಿನಗಳಲ್ಲಿ ರೋಗ ಪ್ರಸರಣವು ಇನ್ನೂ ಹೆಚ್ಚುವ ಸಾಧ್ಯತೆ ಇದೆ. ವಾಡಿಕೆಯಂತೆ ಏಪ್ರಿಲ್–ಮೇ ಮಾಹೆಯಿಂದಲೂ ಡೆಂಗಿ ಜ್ವರ ನಿಯಂತ್ರಣ ಕ್ರಮಗಳನ್ನು ಆರೋಗ್ಯ ಇಲಾಖೆಯು ಆದ್ಯತೆಯ ಮೇಲೆ ಅನುಷ್ಠಾನಗೊಳಿಸುತ್ತಿದ್ದರು ಸಹ ಇತರೆ ಇಲಾಖೆಗಳು ಹಾಗೂ ಸಾರ್ವಜನಿಕರ ಪೂರ್ಣ ಸಹಕಾರವಿಲ್ಲದೆ, ಡೆಂಗಿ ಜ್ವರ ನಿಯಂತ್ರಣ ಅಸಾಧ್ಯವಾಗಿದೆ. ಈ ಹಿನ್ನೆಲೆಯಲ್ಲಿ ಪ್ರತಿ ಶುಕ್ರವಾರ ಸಾರ್ವಜನಿಕರು ಸ್ವತಃ ತಮ್ಮ ಮನೆಗಳು, ಕಚೇರಿಗಳು, ಶಾಲಾ–ಕಾಲೇಜುಗಳು, ಇತ್ಯಾದಿಗಳಲ್ಲಿ ನೀರು ತುಂಬುವ ಪರಿಕರಗಳನ್ನು (ಸಿಮೆಂಟ್ ತೊಟ್ಟಿ, ಡ್ರಂ, ಬ್ಯಾರೆಲ್, ಇತ್ಯಾದಿ) ಸ್ವಚ್ಛಗೊಳಿಸುವುದು, ಮಳೆ ನೀರು ಸಂಗ್ರಹವಾಗುವ ಘನತ್ಯಾಜ್ಯ ವಸ್ತುಗಳ ವಿಲೇವಾರಿ ಮಾಡುವುದರ ಮೂಲಕ, ಡೆಂಗಿ ಜ್ವರ ನಿಯಂತ್ರಣ ಕ್ರಮದಲ್ಲಿ ಅತಿ ಮುಖ್ಯವಾದ ಈಡಿಸ್ ಸೊಳ್ಳೆಗಳ ಉತ್ಪತ್ತಿ ತಾಣ ನಾಶ ಚಟುವಟಿಕೆಯನ್ನು ನಡೆಸುವುದರ ಮೂಲಕ ಈಡಿಸ್ ಸೊಳ್ಳೆಗಳ ಉತ್ಪತ್ತಿ ತಾಣಗಳನ್ನು ನಿರ್ಮೂಲನೆ ಮಾಡಿ ಡೆಂಗಿ ಜ್ವರದಿಂದ ಪಾರಾಗಬಹುದು.

2024ನೇ ಸಾಲಿನ ರಾಷ್ಟ್ರೀಯ ಡೆಂಗಿ ದಿನ (16ನೇ ಮೇ 2024) ಹಾಗೂ ಜುಲೈ ತಿಂಗಳಿನಲ್ಲಿ ಆಚರಿಸಲ್ಪಡುವ ಡೆಂಗಿ ವಿರೋಧ ಮಾಸಾಚರಣೆಯ ಧ್ಯೇಯವಾಕ್ಯವು ಸಮುದಾಯದೊಂದಿಗೆ ಸೇರಿ ಡೆಂಗಿ ಜ್ವರವನ್ನು ನಿಯಂತ್ರಿಸೋಣ ಎಂಬುದಾಗಿದೆ. ಈ ಹಿನ್ನೆಲೆಯಲ್ಲಿ, ಡೆಂಗಿ ಜ್ವರ ನಿಯಂತ್ರಣ ಕ್ರಮಗಳ ಅನುಷ್ಠಾನದಲ್ಲಿ ಸಾರ್ವಜನಿಕರನ್ನು ಸಕ್ರಿಯವಾಗಿ ತೊಡಗಿಸಿಕೊಳ್ಳಲು ನಿರ್ಧರಿಸಲಾಗಿದೆ.

ಪ್ರತಿ ಗುರುವಾರ ಲಸಿಕಾ ದಿನವಾಗಿರುವಂತೆ ಪ್ರತಿ ಶುಕ್ರವಾರ ಈಡಿಸ್ ಸೊಳ್ಳೆ ನಿರ್ಮೂಲನಾ ದಿನವನ್ನಾಗಿ ಆಚರಿಸುವುದನ್ನು ಸಾರ್ವಜನಿಕರ ದಿನಚರಿಯ ದೈನಂದಿನ ಅಭ್ಯಾಸ / ಪದ್ಧತಿಯನ್ನಾಗಿ ಮಾಡುವುದರ ಮೂಲಕ ವರ್ತನೆಯಲ್ಲಿ ಶಾಶ್ವತ ಬದಲಾವಣೆಯನ್ನು ತರುವ ನಿಟ್ಟಿನಲ್ಲಿ ಈ ಚಟುವಟಿಕೆಯನ್ನು ಅಭಿಯಾನದಂತೆ ಅನುಷ್ಠಾನಗೊಳಿಸಲು ಸೂಚಿಸಿದ್ದು ಇದರಿಂದ ಡೆಂಗಿ ಜ್ವರ ನಿಯಂತ್ರಣದಲ್ಲಿ ಸಾರ್ವಜನಿಕರು ಸ್ವಯಂ ಯೋಧರಾಗುತ್ತಾರೆ.

ಜೂನ್ 28ರಂದು ಶುಕ್ರವಾರ ಮಾನ್ಯ ಆರೋಗ್ಯ ಸಚಿವರು ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಯಲ್ಲಿ ಈಡಿಸ್ ಲಾರ್ವಾ ಉತ್ಪತ್ತಿ ತಾಣ ನಾಶ ಚಟುವಟಿಕೆಗೆ ಚಾಲನೆ ನೀಡಲಿದ್ದಾರೆ.

ರಾಜ್ಯದಾದ್ಯಂತ ಏಕಕಾಲದಲ್ಲಿ ಸಾರ್ವಜನಿಕರನ್ನು ತೊಡಗಿಸಿಕೊಂಡು ‘ಈಡಿಸ್ ಲಾರ್ವಾ ಉತ್ಪತ್ತಿ ತಾಣ ನಾಶ ಚಟುವಟಿಕೆ’ಯನ್ನು ಅನುಷ್ಠಾನಗೊಳಿಸುವುದು ಡೆಂಗಿ ಜ್ವರ ನಿಯಂತ್ರಣದಲ್ಲಿ ಮೈಲುಗಲ್ಲಾಗಲಿದೆ. ಡೆಂಗಿ ಜ್ವರ ಪ್ರಸರಣದ ಅವಧಿಯನ್ನು ಪರಿಗಣಿಸಿ ಸಾರ್ವಜನಿಕರನ್ನು ಸಕ್ರಿಯವಾಗಿ ತೊಡಗಿಸಿಕೊಂಡು ನಡೆಸುವ ಈ ಚಟುವಟಿಕೆಯನ್ನು ಎಲ್ಲಾ ಹಂತಗಳಲ್ಲೂ ಸಮರೋಪಾದಿಯಲ್ಲಿ ನಡೆಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರು ಕಟ್ಟುನಿಟ್ಟಾಗಿ ಸೂಚನೆ ನೀಡಿದ್ದಾರೆ ಎಂದು ಜಿಲ್ಲಾ ಆರೋಗ್ಯ ಇಲಾಖೆಯ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *