ಹೊಸಪೇಟೆ (ವಿಜಯನಗರ) : ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ನಾಡು-ನುಡಿಯ ಸೇವೆಗೆ ಕಲೆ, ಸಾಹಿತ್ಯ ಮತ್ತು ಸಂಸ್ಕೃತಿ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿ, ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕಲಾವಿದರಿಗೆ ಮಾಸಾಶನ ನೀಡಲಾಗುದು.
ಸೌಲಭ್ಯಕ್ಕೆ ಅರ್ಜಿ ಆಹ್ವಾನ.
ವಿಜಯನಗರ ಜಿಲ್ಲೆಯಲ್ಲಿರುವ 58 ವರ್ಷ ಮೇಲ್ಪಟ್ಟ ಕಲಾವಿದರು ಜನ್ಮ ದಿನಾಂಕದ ದಾಖಲೆಯೊಂದಿಗೆ ಹೊಸಪೇಟೆಯ ತಾಲೂಕು ಕಚೇರಿಯಲ್ಲಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಬಂದು ಮಾಸಾಶನ ಅರ್ಜಿಗಳನ್ನು ಪಡೆಯಬಹುದಾಗಿ. ನಿಗದಿತ ಅರ್ಜಿ ನಮೂನೆಯ ಮಾದರಿಯು ಈ ಇಲಾಖೆಯಲ್ಲಿ ಲಭ್ಯವಿರುತ್ತದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.