ಹೊಸಪೇಟೆ (ವಿಜಯನಗರ) : ಜಿಲ್ಲಾಧಿಕಾರಿಗಳಾದ ಎಂ.ಎಸ್.ದಿವಾಕರ ಅವರು ಜುಲೈ 5ರಂದು ಕೊಟ್ಟೂರ ತಾಲೂಕಿಗೆ ಭೇಟಿ ನೀಡಿ ಜನಸ್ಪಂದನ ಕಾರ್ಯಕ್ರಮದಡಿ ಸಾರ್ವಜನಿಕರ ಅಹವಾಲು ಆಲಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತಾಲೂಕಾಡಳಿತ ಮತ್ತು ತಾಲೂಕು ಪಂಚಾಯಿತಿ ಆಶ್ರಯದಲ್ಲಿ ಕೊಟ್ಟೂರ ನಗರದ ಎಪಿಎಂಸಿ ಆವರಣದಲ್ಲಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕರಾದ ನೇಮಿರಾಜ ನಾಯಕ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನೋಂಗ್ಜಾಯ್ ಮೊಹಮ್ಮದ್ ಅಲಿ ಅಕ್ರಮ ಶಾ, ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಲೀಮ್ ಪಾಶಾ ಮತ್ತು ಜಿಲ್ಲಾಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳ ಸಮ್ಮುಖದಲ್ಲಿ ಜಿಲ್ಲಾಧಿಕಾರಿಗಳು ಸ್ವೀಕೃತವಾದ ಅರ್ಜಿಗಳನ್ನು ಪರಿಶೀಲಿಸಿದರು.
ಜಂಟಿ ಕೃಷಿ ನಿರ್ದೇಶಕರಾದ ಶರಣಪ್ಪ ಮುದಗಲ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ರಾಮಚಂದ್ರಪ್ಪ ಕೆ.ಬಿ., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಇಲಾಖೆಯ ಅಧಿಕಾರಿ ಡಾ.ಶಂಕರ ನಾಯಕ, ಆಹಾರ ಇಲಾಖೆಯ ಉಪ ನಿರ್ದೇಶಕರಾದ ಮಲ್ಲಿಕಾರ್ಜುನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಶ್ವೇತಾ ಸೇರಿದಂತೆ ವಿವಿಧ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದು ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಆಯಾ ಇಲಾಖೆಗಳಿಗೆ ಸಂಬAಧಿಸಿದ ಅರ್ಜಿಗಳನ್ನು ಪರಿಶೀಲಿಸಿ ಮಾಹಿತಿ ನೀಡಿದರು. ಕುಡಿಯುವ ನೀರು ಪೂರೈಕೆ, ಮಾಸಾಶನ, ರಸ್ತೆ ಸುಧಾರಣೆ, ವಿದ್ಯುತ್ ಸಂಪರ್ಕ, ವಿವಿಧ ಭವನಗಳ ಮಂಜೂರಾತಿ ಸೇರಿದಂತೆ ನಾನಾ ವಿಷಯಗಳ ಬಗ್ಗೆ ಸಾರ್ವಜನಿಕರು ತಮ್ಮ ಅಹವಾಲನ್ನು ಸಲ್ಲಿಸಿದರು. ಅಧಿಕಾರಿಗಳ ಸಮ್ಮುಖದಲ್ಲಿ ಜಿಲ್ಲಾಧಿಕಾರಿಗಳು ಸಾರ್ವಜನಿಕ ಅಹವಾಲುಗಳ ಬಗ್ಗೆ ಚರ್ಚಿಸಿ ಕೆಲವು ಅಹವಾಲುಗಳನ್ನು ಸ್ಥಳದಲ್ಲಿಯೇ ಇತ್ಯರ್ಥಪಡಿಸಿದರು.

ಅರ್ಜಿಗಳ ಮಾಹಿತಿ
ಕಂದಾಯ ಇಲಾಖೆಗೆ 61, ಪಟ್ಟಣ ಪಂಚಾಯಿತಿಗೆ 19, ಕೃಷಿ ಇಲಾಖೆಗೆ 12, ತಾಲೂಕು ಪಂಚಾಯಿತಿಗೆ 10, ಜೆಸ್ಕಾಂ ಮತ್ತು ಸಿಡಿಪಿಓಗೆ ತಲಾ 4., ಸಾರಿಗೆ, ಭೂಮಾಪನ ಮತ್ತು ಆಹಾರ ಇಲಾಖೆಗೆ ತಲಾ 3, ಶಿಕ್ಷಣ ಇಲಾಖೆಗೆ 2, ಪಶುಪಾಲನೆ, ಎಪಿಎಂಸಿ, ಆರೋಗ್ಯ ಇಲಾಖೆ, ತೋಟಗಾರಿಕಾ ಇಲಾಖೆಗಳಿಗೆ ತಲಾ 1 ಅರ್ಜಿಗಳು ಸೇರಿ ಒಟ್ಟು 113 ಅರ್ಜಿಗಳು ಸ್ವೀಕೃತವಾದವು. ಸ್ವೀಕೃತವಾದ ಒಟ್ಟು ಅರ್ಜಿಗಳ ಪೈಕಿ 12 ಅರ್ಜಿಗಳನ್ನು ಸ್ಥಳದಲ್ಲಿಯೇ ವಿಲೇ ಮಾಡಲಾಯಿತು.
ವಿವಿಧ ಇಲಾಖೆಗಳು ಭಾಗಿ
ಕೃಷಿ, ತೋಟಗಾರಿಕೆ, ಶಾಲಾ ಶಿಕ್ಷಣ ಇಲಾಖೆ, ಆಹಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರಿಗೆ, ಲೋಕೋಪಯೋಗಿ, ಕಾರ್ಮಿಕ, ಅಬಕಾರಿ, ನೋಂದಣಿ ಮತ್ತು ಮುದ್ರಾಂಕ, ಸರ್ವೆ ಇಲಾಖೆ, ಜೆಸ್ಕಾಂ, ಪ್ರಾದೇಶಿಕ ಸಾರಿಗೆ, ಸಣ್ಣ ನೀರಾವರಿ ಮತ್ತು ಅಂತರ್ಜಲ ಇಲಾಖೆ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಮತ್ತು ಕೆಆರ್ ಐಡಿಎಲ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಕಾರ್ಯಕ್ರಮದ ಸ್ಥಳದಲ್ಲಿ ಸಾಲಾಗಿ ಟೇಬಲ್ ಅಳವಡಿಸಿ ಸಾರ್ವಜನಿಕರು ನೀಡುವ ಅರ್ಜಿಗಳನ್ನು ನೋಂದಾಯಿಸಿಕೊAಡರು.
ಆರೋಗ್ಯ ತಪಾಸಣೆ
ತಾಲೂಕು ಆರೋಗ್ಯ ಇಲಾಖೆಯಿಂದ ಕಾರ್ಯಕ್ರಮದ ಸ್ಥಳದಲ್ಲಿ ಉಚಿತವಾಗಿ ಮಧುಮೇಹ, ರಕ್ತದೊತ್ತಡ ಸೇರಿದಂತೆ ವಿವಿಧ ಕಾಯಿಲೆಗಳ ಬಗ್ಗೆ ಪರೀಕ್ಷೆ ನಡೆಸಿ ಔಷಧೋಪಚಾರ ನೀಡಲಾಯಿತು.
ಕಾರ್ಯಕ್ರಮದಲ್ಲಿ ತಾಲೂಕುಮಟ್ಟದ ಅಧಿಕಾರಿಗಳಾದ ತಹಸೀಲ್ದಾರರಾದ ಅಮರೇಶ ಜಿ.ಕೆ., ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ವೈ.ರವಿಕುಮಾರ್, ಸಿಡಿಪಿಓ ವಿಜಯಲಕ್ಷ್ಮಿ, ಬಿಇಓ ಪದ್ಮನಾಭ ಕರ್ಣಂ, ಸಹಾಯಕ ಕೃಷಿ ನಿರ್ದೇಶಕರಾದ ಸುನೀಲಕುಮಾರ, ತೋಟಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕರಾದ ತೋಟಯ್ಯ, ಪಶುಪಾಲನಾ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ.ಕೊಟ್ರೇಶ ಕೆ.ವಿ., ಅರಣ್ಯ ಇಲಾಖೆಯ ಕೂಡ್ಲಿಗಿ ಪ್ರಾದೇಶಿಕ ವಲಯದ ಅರಣ್ಯಾಧಿಕಾರಿ ಸಂದೀಪ ನಾಯಕ ಜಿ.ಎಸ್., ತಾಲೂಕು ಆರೋಗ್ಯಾಧಿಕಾರಿ ಡಾ.ಪ್ರದೀಪ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ಇನ್ನೀತರರು ಇದ್ದರು.