ಮೀನುಗಾರಿಕಾ ಇಲಾಖೆಯಿಂದ ಅರ್ಜಿ ಆಹ್ವಾನ

Loading

ಹೊಸಪೇಟೆ (ವಿಜಯನಗರ ): ವಿಜಯನಗರ ಜಿಲ್ಲೆಯ ಮೀನುಗಾರಿಕೆ ಇಲಾಖೆಯಿಂದ 2024-25ನೇ ಸಾಲಿನ ರಾಜ್ಯ ವಲಯ ಯೋಜನೆಗಳಡಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ರಾಜ್ಯ ವಲಯ ಯೋಜನೆಗಳು: ಮೀನುಗಾರಿಕೆ ಸಲಕರಣೆ ಕಿಟ್ಟುಗಳ ವಿತರಣೆ ಯೋಜನೆಯಡಿ ಸಹಾಯಧನ ನೆರವು, ಮೀನುಮರಿ ಖರೀದಿಸಲು ನೆರವು ಯೋಜನೆ, ಕೆರೆ ಮತ್ತು ಜಲಾಶಯಗಳ ಅಂಚಿನ ಕೊಳಗಳಲ್ಲಿ ಮೀನುಮರಿ ಪಾಲನೆಗೆ ನೆರವು.

ಮೇಲಿನ ಯೋಜನೆಗಳಡಿ ಅರ್ಹರು ಜುಲೈ 15ರೊಳಗೆ ಅಗತ್ಯ ದಾಖಲೆಗಳೊಂದಿಗೆ ಆಯಾ ತಾಲ್ಲೂಕಿನ ಮೀನುಗಾರಿಕೆ ಇಲಾಖೆಯ ಕಚೇರಿಗೆ ಅರ್ಜಿ ಸಲ್ಲಿಸಲು ತಿಳಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ಹೆಸರಿಸಿದ ತಾಲ್ಲೂಕುಗಳ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಗೆ ಸಂಪರ್ಕಿಸಲು ತಿಳಿಸಿದೆ.

ಹೆಚ್ಚಿನ ಮಾಹಿತಿಗಾಗಿ :ಕೂಡ್ಲಿಗಿ, ಹೆಚ್.ಬಿ.ಹಳ್ಳಿ, ಕೊಟ್ಟೂರು ತಾಲೂಕಿನ ಮಂಜುನಾಥ್ ಮೊ: 8217725319, ಹೊಸಪೇಟೆ, ಹಡಗಲಿ ತಾಲೂಕಿನ ಜಿ. ಶಾಂತಕುಮಾರ್, ಮೊ: 9620177588, ಹರಪನಹಳ್ಳಿ ತಾಲೂಕಿನ ಮಲ್ಲೇಶ್ ನಾಯ್, ಮೊ:8951531330 ಇವರಿಗೆ ಸಂಪರ್ಕಿಸಬಹುದಾಗಿದೆ ಎಂದು ಮೀನುಗಾರಿಕೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *