
ಹಗರಿಬೊಮ್ಮನಹಳ್ಳಿ: ತಾಲೂಕಿನ ತಂಬ್ರಹಳ್ಳಿ ಗ್ರಾಮದ ಶಿಕ್ಷಣ ಪ್ರೇಮಿ ಸಾಮಾಜಿಕ ಧಾರ್ಮಿಕ ಕಾರ್ಯಗಳಿಗೆ ಕೊಡುಗೈ ದಾನಿ ಆಗಿದ್ದ ಮಂಡಲ ಪಂಚಾಯತಿ ಮಾಜಿ ಪ್ರಧಾನರಾಗಿದ್ದ ಅಕ್ಕಿ ಕೊಟ್ರಪ್ಪನವರು (92) ನಿಧನರಾಗಿದ್ದಾರೆ.
ತಾಲೂಕಿನ ತಂಬ್ರಹಳ್ಳಿ ಗ್ರಾಮದ ತಮ್ಮ ನಿವಾಸದಲ್ಲಿ ಶನಿವಾರ ರಾತ್ರಿ 9ಕ್ಕೆ ನಿಧರಾಗಿದ್ದಾರೆ. ಮೃತರು ಪತ್ನಿ ಮೂರು ಜನ ಪುತ್ರರು ಇಬ್ಬರು ಪುತ್ರಿಯರನ್ನು ಸೊಸೆಯಂದಿರು ಮೊಮ್ಮಕ್ಕಳನ್ನು ಅಳಿಯಂದಿರನ್ನು ಅಪಾರ ಬಂದು ಬಾಂಧವರನ್ನು ಆಗಲಿದ್ದಾರೆ. ಇವರ ನಿಧನ ಸುದ್ದಿ ತಿಳಿಯುತ್ತಿದ್ದಂತೆ ತಾಲೂಕಿನ ವಿವಿಧ ಭಾಗದ ತಂಬ್ರಹಳ್ಳಿಯ ಸುತ್ತಮುತ್ತಲ ಗ್ರಾಮದ ಸಾವಿರಾರು ಜನರು ಮಠಾಧೀಶರು ಜನಪ್ರತಿನಿಧಿಗಳು ರಾಜಕೀಯ ಮುಖಂಡರು ಸಂಘ ಸಂಸ್ಥೆಗಳ ಪದಾಧಿಕಾರಿಗಳು ಮೃತರ ಅಂತಿಮ ದರ್ಶನ ಪಡೆದುಕೊಂಡು ಸಂತಾಪ ಸೂಚಿಸಿದ್ದಾರೆ. ಅಕ್ಕಿ ಕೊಟ್ರಪ್ಪನವರು ತಮ್ಮ ದೇಹವನ್ನು ದಾವಣಗೆರೆಯ ಆಸ್ಪತ್ರೆಗೆ ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.