ತುಂಗಭದ್ರಾ ನದಿ ಪಾತ್ರಕ್ಕೆ ಜಿಲ್ಲಾಧಿಕಾರಿಗಳಭೇಟಿ; ಪರಿಶೀಲನೆ, ಮುಂಜಾಗ್ರತೆಗೆ ಸೂಚನೆ

Loading

ಹೊಸಪೇಟೆ (ವಿಜಯನಗರ) : ತುಂಗಭದ್ರ ಜಲಾಶಯದಿಂದ ಬಾರಿ ಪ್ರಮಾಣದಲ್ಲಿ ನದಿಗೆ ನೀರು ಹರಿಯುತ್ತಿರುವುದರಿಂದ ನದಿಪಾತ್ರದ ಸ್ಥಳಗಳಿಗೆ ಜಿಲ್ಲಾಧಿಕಾರಿಗಳಾದ ಎಂ.ಎಸ್ ದಿವಾಕರ ಅವರು ಜುಲೈ 26ರಂದು ಭೇಟಿ ನೀಡಿ ಪರಿಶೀಲಿಸಿದರು.

ಜಿಲ್ಲಾಧಿಕಾರಿಗಳು, ಮೊದಲಿಗೆ ಹಂಪಿಯ ವಿರುಪಾಕ್ಷೇಶ್ವರ ದೇವಸ್ಥಾನÀ ಪಕ್ಕದ ನದಿ ಪಾತ್ರದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನದಿಯು ದೇವಸ್ಥಾನ ಪಕ್ಕದಲ್ಲೆ ಇರುವುದರಿಂದ ಮುನ್ನೆಚ್ಚರಿಕೆ ವಹಿಸಬೇಕು. ಸ್ನಾನ ಮಾಡಲು ನದಿಗೆ ಇಳಿಯದಂತೆ ಭಕ್ತರಿಗೆ ಸೂಚನೆ ನೀಡಬೇಕು. ನದಿದಡದಲ್ಲಿ ಸದ್ಯಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಿ ಮುಂಜಾಗ್ರತೆ ವಹಿಸಬೇಕು ಎಂದು ಸೂಚನೆ ನೀಡಿದರು. ಈ ಬಗ್ಗೆ ಸೂಕ್ತ ಮೇಲ್ವಿಚಾರಣೆ ಮಾಡಬೇಕು ಎಂದು ಜಿಲ್ಲಾಧಿಕಾರಿಗಳು ಹಂಪಿ ಗ್ರಾಮ ಪಂಚಾಯತ್ ಪಿಡಿಓ ಅವರಿಗೆ ನಿರ್ದೇಶನ ನೀಡಿದರು.

ಬಳಿಕ ಜಿಲ್ಲಾಧಿಕಾರಿಗಳು, ಹಂಪಿಯ ಪ್ರವಾಸಿ ಪೊಲೀಸ್ ಠಾಣೆಯ ಹಿಂಭಾಗದಲ್ಲಿರುವ ರಾಮ-ಲಕ್ಷö್ಮಣರ ದೇವಸ್ಥಾನ ಹತ್ತಿರದ ಸ್ಥಳಕ್ಕೆ ತೆರಳಿದರು. ರಾಮ-ಲಕ್ಷö್ಮಣ ದೇವಾಸ್ಥಾನಕ್ಕೆ ಹೋಗುವ ದಾರಿ ಸಂಪೂರ್ಣ ಮುಚ್ಚಿರುವುದನ್ನು ನೋಡಿದರು. ದೇವಸ್ಥಾನಕ್ಕೆ ಬರುವ ಸಾರ್ವಜನಿಕರಿಗೆ ಬೇರೆಡೆ ದಾರಿ ವ್ಯವಸ್ಥೆ ಮಾಡಿದ್ದೀರಾ? ಎಂದು ಕೇಳಿ ಮಾಹಿತಿ ಪಡೆದರು.

ನೀರಿನ ಹರಿವು ಹೆಚ್ಚಿರುವ ಕಾರಣ ಪ್ರವಾಸಿಗರ ದಂಡು ನೀರಿನ ವೀಕ್ಷಣೆಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಬರುವುದರಿಂದ ನದಿಪಾತ್ರ ಎಲ್ಲಾ ಕಡೆಗಳಲ್ಲಿ ಗೃಹ ರಕ್ಷಕ ದಳದ ಸಿಬ್ಬಂದಿಯನ್ನು ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜನೆ ಮಾಡಬೇಕು ಎಂದು ಹಂಪಿಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಅವರಿಗೆ ಜಿಲ್ಲಾಧಿಕಾರಿಗಳು ತಿಳಿಸಿದರು.

ನಂತರ ಹಂಪಿಯ ಮತ್ತೊಂದು ಪ್ರವಾಸಿ ತಾಣವಾದ ವಿಜಯವಿಠ್ಠಲ ದೇವಾಸ್ಥಾನ ಹತ್ತಿರ ತೆರಳಿ, ನದಿ ನೀರಿಗೆ ಅಲ್ಲಿನ ಪುರಂದರ ಮಂಟಪ ಮುಳುಗಿರುವುದನ್ನು ವೀಕ್ಷಿಸಿದರು. ನದಿ ಪಾತ್ರಕ್ಕೆ ಪ್ರವಾಸಿಗರು ಆಗಮಿಸಿ ಸೆಲ್ಪಿ ಕ್ಲಿಕ್ಕಿಸುವ ಬರದಲ್ಲಿ ಅನಾಹುತ ಮಾಡಿಕೊಳ್ಳುವ ಸಾಧ್ಯತೆ ಇದ್ದು, ಇದನ್ನು ತಡೆಯಲು ಸರಿಯಾದ ಸೂಚನೆ ನೀಡಲು ಕ್ರಮ ವಹಿಸಬೇಕು ಎಂದು ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು.

ಅಧಿಕಾರಿಗಳಿಗೆ ಸೂಚನೆ: ಹಂಪಿಯು ಪ್ರಸಿದ್ಧ ಪ್ರವಾಸಿ ತಾಣವಾಗಿದೆ. ಮಳೆಗಾಲ ಮತ್ತು ನದಿಗೆ ಹರಿಬಿಟ್ಟಾಗ ಈ ಪ್ರದೇಶವು ಮತ್ತಷ್ಟು ಆಕರ್ಷಕವಾಗಿರುತ್ತದೆ. ಈ ಸಮಯದಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಾಗಬಹುದು. ಆದ್ದರಿಂದ ಅಧಿಕಾರಿಗಳು ಮುಂಜಾಗ್ರತ ಕ್ರಮಗಳನ್ನು ಮಾಡಿಕೊಳ್ಳಬೇಕು. ಹೆಚ್ಚಾಗಿ ಪ್ರವಾಸಿಗರು ಯಾವ ಕಡೆಗಳಲ್ಲಿ ಭೇಟಿ ನೀಡುತ್ತಾರೆ? ಯಾವಕಡೆಗಳಲ್ಲಿ ಹೆಚ್ಚಾಗಿ ಅಪಾಯಕ್ಕೆ ಸಿಲುಕುತ್ತಾರೆ? ಯಾವ ಯಾವ ಕಡೆಗಳಲ್ಲಿ ಸೂಚನಾ ಫಲಕಗಳನ್ನು ಅಳವಡಿಸಬೇಕಾಗಬಹುದು? ಹೆಚ್ಚಿನ ಸಂಖ್ಯೆಯಲ್ಲಿ ಯಾವ ಕಡೆಗಳಲ್ಲಿ ಭದ್ರತಾ ಸಿಬ್ಬಂದಿಯನ್ನು ನೇಮಕ ಮಾಡಬೇಕಾಗುತ್ತದೆ? ಎಂಬುದರ ಬಗ್ಗೆ ಅಧಿಕಾರಿಗಳು ಗಮನ ಹರಿಸಬೇಕು. ಕಾಲಕಾಲಕ್ಕೆ ವಾಸ್ತವ ಸ್ಥಿತಿಗತಿಯ ಬಗ್ಗೆ ವರಿದಿ ನೀಡಬೇಕು. ಪ್ರವಾಸಿಗರನ್ನು ನದಿಪಾತ್ರಕ್ಕೆ ಬಿಡದಂತೆ ಎಚ್ಚರ ವಹಿಸಬೇಕು ಎಂದು ಇದೆ ವೇಳೆ ಜಿಲ್ಲಾಧಿಕಾರಿಗಳು ಹಂಪಿಯ ಗ್ರಾಮ ಪಂಚಾಯಿತಿ, ಪೊಲೀಸ್ ಇಲಾಖೆ, ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಹೊಸಪೇಟೆಯ ಸಹಾಯಕ ಆಯುಕ್ತರಾದ ವಿವೇಕಾನಂದ, ಜಿಲ್ಲಾ ಪಂಚಾಯತ್‌ನ ಉಪ ಕಾರ್ಯದರ್ಶಿ ಭೀಮಪ್ಪ ಲಾಳಿ, ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರಾದ ಪ್ರಭುಲಿಂಗ ಎಸ್.ತಳಿಕೆರೆ, ಹೊಸಪೇಟೆಯ ತಹಸೀಲ್ದಾರರಾದ ವಿಶ್ವಜಿತ್ ಮೆಹತಾ, ಹಂಪಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಶಿವಕುಮಾರ ನಾಯ್ಕ, ಹಂಪಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾದ ರಜೀನಿ ಷಣ್ಮುಖ ಗೌಡ, ಪಿಡಿಓ ಗಂಗಾಧರ ಮತ್ತು ಇನ್ನೀತರ ಅಧಿಕಾರಿಗಳು ಇದ್ದರು.

Leave a Reply

Your email address will not be published. Required fields are marked *