
ಹಗರಿಬೊಮ್ಮನಹಳ್ಳಿ : ನಗರದಲ್ಲಿ ಕರ್ನಾಟಕದ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ವಿರುದ್ಧ ಪೋಲೀಸರು ತನಿಖೆಗೆ ಅನುಮತಿ ಕೇಳದಿದ್ದರೂ ಮುಡಾ ಪ್ರಕರಣದಲ್ಲಿ ಪ್ರಾಸಿಕ್ಯೂಶನ್ ಗೆ ಅನುಮತಿ ನೀಡಿರುವ ರಾಜ್ಯಪಾಲ ಶ್ರೀ ಥಾವರ್ ಚಂದ್ ಗೆಹಲೋಟ್ ಅವರ ನಡೆ ಸಂವಿಧಾನ ವಿರೋಧಿ ಮತ್ತು ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದ್ದು ತಕ್ಷಣವೇ ಪ್ರಾಸಿಕ್ಯೂಶನ್ ಅನುಮತಿಯನ್ನು ವಾಪಸ್ ಪಡೆಯಲು ಹಗರಿಬೊಮ್ಮನಹಳ್ಳಿ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಿ ಒತ್ತಾಯಿಸಲಾಯಿತು.
ಈಗಾಗಲೇ ಪೊಲೀಸರು ತನಿಖೆಗಾಗಿ ಅನುಮತಿ ಕೇಳಿರುವ ಕೇಂದ್ರ ಸಚಿವ ಶ್ರೀ ಹೆಚ್ ಡಿ ಕುಮಾರಸ್ವಾಮಿ ಮಾಜಿ ಸಚಿವರಾದ ಶ್ರೀಮತಿ ಶಶಿಕಲಾ ಜೊಲ್ಲೆ ಶ್ರೀ ಮುರುಗೇಶ್ ನಿರಾಣಿ ಶ್ರೀ ಜನಾರ್ಧನ ರೆಡ್ಡಿ ಅವರ ವರ್ಷಗಳ ಹಿಂದಿನ ಪ್ರಕರಣಗಳನ್ನು ಬದಿಗಿಟ್ಟು ಕೇವಲ ತಿಂಗಳೊಳಗೆ ಶ್ರೀ ಸಿದ್ದರಾಮಯ್ಯ ಅವರ ಪ್ರಕರಣವನ್ನು ತುರ್ತಾಗಿ ಪ್ರಾಸಿಕ್ಯೂಷನ್ ಗೆ ನೀಡಿರುವುದು ದುರುದ್ದೇಶಪೂರ್ವಕ ರಾಜಕಾರಣವಾಗಿದ್ದು ಬಹುಮತದ ಕಾಂಗ್ರೆಸ್ ಸರ್ಕಾರವನ್ನು ಪತನಗೊಳಿಸುವ ಉದ್ದೇಶ ಹೊಂದಿದ್ದು ರಾಜ್ಯಪಾಲರು ಕೇಂದ್ರದ ಕೈ ಗೊಂಬೆಯಾಗಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ಮೇಲ್ನೋಟಕ್ಕೆ ಗೋಚರಿಸುತ್ತಿದ್ದು ತಕ್ಷಣವೇ ರಾಜ್ಯಪಾಲರು ಈ ನಿರ್ಧಾರವನ್ನು ವಾಪಸ್ ಪಡೆಯಬೇಕು ಎಂದು ಪ್ರತಿಭಟನೆಯಲ್ಲಿ ಪುರಸಭಾ ಸದಸ್ಯರಾದ ಮರಿ ರಾಮಣ್ಣ ಮಾತನಾಡಿ ರಾಜ್ಯಪಾಲರು ಕೇಂದ್ರದ ಕೈ ಗೊಂಬೆಯಂತೆ ವರ್ತಿಸುತ್ತಿದ್ದಾರೆ ತಕ್ಷಣವೇ ಆದೇಶವನ್ನು ಹಿಂಪಡೆ ಬೇಕೆಂದು ಒತ್ತಾಯಿಸಿದರು.