ಹೊಸಪೇಟೆ (ವಿಜಯನಗರ) : ಅಂತಾರಾಷ್ಟಿçÃಯ ಪ್ರಜಾಪ್ರಭುತ್ವ ದಿನಾಚರಣೆ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 15ನ್ನು ಕರ್ತವ್ಯ ದಿನವನ್ನಾಗಿ ಪರಿಗಣಿಸಿ ಶಾಲಾ ಕಾಲೇಜು ವಿದ್ಯಾರ್ಥಿಗಳನ್ನು ಅಂದು ನಡೆಯುವ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಪಾಲ್ಗೊಳ್ಳುವಂತೆ ಸೂಕ್ತ ನಿರ್ದೇಶನ ನೀಡಿ ಅಗತ್ಯ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಎಂ.ಎಸ್.ದಿವಾಕರ ಅವರು ವಿಜಯನಗರ ಜಿಲ್ಲೆಯ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಸೆಪ್ಟೆಂಬರ್ 15ರಂದು ಬೆಳಗ್ಗೆ 7.30ಕ್ಕೆ ಮಾನವ ಸರಪಳಿ ರಚಿಸುವ ಕಾರ್ಯಕ್ರಮ ಆರಂಭವಾಗಲಿದೆ. ಇದಕ್ಕಾಗಿ ಈಗಾಗಲೇ ರೂಟ್ ಮ್ಯಾಪನ್ನು ಅಂತಿಮಗೊಳಿಸಲಾಗಿದೆ. ಅದರನ್ವಯ ಮಾನವ ಸರಪಳಿ ಕೊಪ್ಪಳ ಜಿಲ್ಲೆಯಿಂದ ಎನ್ಎಚ್-50 ರಾಷ್ಟಿçÃಯ ಹೆದ್ದಾರಿ ಮುಖೇನ ವಿಜಯನಗರ ಜಿಲ್ಲೆಯ ಸರಹದ್ದು ಆದ ಟಿ.ಬಿ.ಡ್ಯಾಮನ್ ಗಣೇಶ ದೇವಸ್ಥಾನದ ಹತ್ತಿರ ಇರುವ ಮೊದಲನೇ ಸೇತುವೆಯಿಂದ ಪ್ರವೇಶವಾಗಿ ವಿವಿಧೆಡೆ ಸುಮಾರು 38 ಕಿ.ಮೀನಷ್ಟು ರಚಿಸಲಾಗುತ್ತದೆ.
ಸೆಪ್ಟೆಂಬರ 15 ಭಾನುವಾರ ದಿನವಾಗಿದೆ. ಆ ದಿನದಂದು ಅಂತಾರಾಷ್ಟಿçÃಯ ಪ್ರಜಾಪ್ರಭುತ್ವ ದಿನಾಚರಣೆ ಆಚರಿಸಲಾಗುತ್ತಿರುವ ಹಿನ್ನೆಲೆಯಲ್ಲಿ ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿಗಳು ಭಾಗಹಿಸಿ ಮಾನವ ಸರಪಳಿಯನ್ನು ಸೆಪ್ಟೆಂಬರ್ 15ರ ಬೆಳಗ್ಗೆ 8 ಗಂಟೆಗೆ ನಿರ್ಮಿಸಬೇಕಾಗಿರುವುದರಿಂದ ಹೊಸಪೇಟೆ ತಾಲೂಕಿನ ಎಲ್ಲ ಶಾಲಾ-ಕಾಲೇಜುಗಳಿಗೆ ಸೆಪ್ಟೆಂಬರ್ 15 ಭಾನುವಾರದಂದು ಕರ್ತವ್ಯ ದಿನ ಎಂದು
ಪರಿಗಣಿಸಿ ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಸಿಬ್ಬಂದಿಯು ಕಡ್ಡಾಯಾಗಿ ಕಾರ್ಯಕ್ರಮದಲ್ಲಿ ಪಾಲ್ಗೊಳುವಂತೆ ಸೂಕ್ತ ನಿರ್ದೇಶನ ನೀಡಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ವಿಜಯನಗರ ಜಿಲ್ಲೆಯ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಹಾಗೂ ಶಾಲಾ-ಶಿಕ್ಷಣ ಮತ್ತು ಸಾಕ್ಷರತ ಇಲಾಖೆಯ ಉಪನಿರ್ದೇಶಕರಿಗೆ ಜಿಲ್ಲಾಧಿಕಾರಿಗಳು ಪತ್ರ ಬರೆದು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.