ಹೊಸಪೇಟೆ (ವಿಜಯನಗರ) ಸೆಪ್ಟಂಬರ್ 10 : ವಿಜಯನಗರ ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ 2024-25ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಸೂರ್ಯಕಾಂತಿ ಉತ್ಪನ್ನವನ್ನು ಖರೀದಿಸುವ ಪ್ರಕ್ರಿಯೆ ನಡೆಯುತ್ತಿದೆ. ಎಫ್.ಎ.ಕ್ಯೂ ಗುಣಮಟ್ಟದ ಸೂರ್ಯಕಾಂತಿ ಉತ್ಪನ್ನವನ್ನು ಕೇಂದ್ರ ಸರ್ಕಾರ ನಿಗದಿಪಡಿಸಿದ ಬೆಂಬಲ ಬೆಲೆ ಪ್ರತಿ ಕ್ವಿಂಟಾಲ್ 7280 ರೂ. ದಂತೆ ರೈತರಿಂದ ಖರೀದಿಗಾಗಿ ಖರೀದಿ ಕೇಂದ್ರಗಳನ್ನು ಜಿಲ್ಲೆಯ ವಿವಿಧೆಡೆ ಪ್ರಾರಂಭಿಸಲಾಗಿದ್ದು, ಜಿಲ್ಲೆಯ ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿಯ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿಗಳಾದ ಎಂ.ಎಸ್.ದಿವಾಕರ ಅವರು ತಿಳಿಸಿದ್ದಾರೆ.
ಬೆಂಬಲ ಬೆಲೆ ಯೋಜನೆಯಡಿ 2024-25ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಸರ್ಕಾರದ ಆದೇಶದಲ್ಲಿನ ಮಾರ್ಗಸೂಚನೆಯಂತೆ, ವಿಜಯನಗರ ಜಿಲ್ಲೆಯಲ್ಲಿ ರಾಜ್ಯ ಸರ್ಕಾರದಿಂದ ಕರ್ನಾಟಕ ಸಹಕಾರಿ ಎಣ್ಣೆ ಬೀಜ ಬೆಳೆಗಾರರ ಮಹಾ ಮಂಡಳಿ ನಿಯಮಿತ ಚಿತ್ರದುರ್ಗ, ವಿಭಾಗೀಯ ಕಚೇರಿ, ವಿಜಯನಗರ ಇವರಿಂದ ಎಫ್.ಎ.ಕ್ಯೂ ಗುಣಮಟ್ಟದ ಸೂರ್ಯಕಾಂತಿ ಉತ್ಪನ್ನವನ್ನು ಖರೀದಿಸಲಾಗುತ್ತಿದೆ.
ಕೂಡಲೇ ಹೆಸರು ನೋಂದಾಯಿಸಿ:ಒಣಗಿದ ಹಾಗೂ ಸ್ವಚ್ಛ ಎಫ್.ಎ.ಕ್ಯೂ ಗುಣಮಟ್ಟದ ಸೂರ್ಯಕಾಂತಿ ಉತ್ಪನ್ನವನ್ನು ಕೇಂದ್ರಕ್ಕೆ ಮಾರಾಟಕ್ಕೆ ತರಬೇಕು. ಸೂರ್ಯಕಾಂತಿ ಖರೀದಿ ಕೇಂದ್ರಗಳಲ್ಲಿ ರೈತರು ತಮ್ಮ ಹೆಸರನ್ನು 24-08-2024ರಿಂದ ಅನ್ವಯವಾಗುವಂತೆ 45 ದಿನಗಳೊಳಗೆ ನೋಂದಣಿ ಮಾಡಿಸಬೇಕು. ನೋಂದಣಿ ಚೀಟಿ ಪಡೆಯಬೇಕು. ನಿಗದಿತ ಅವಧಿಯೊಳಗೆ ನೋಂದಣಿಗೊAಡ ರೈತರಿಂದ ಪ್ರತಿ ಎಕರೆಗೆ 03 (ಮೂರು) ಕ್ವಿಂಟಾಲ್s ಗರಿಷ್ಠ 15 (ಹದಿನೈದು) ಕ್ವಿಂಟಾಲ್ ಮಾತ್ರ ಖರೀದಿಸಲಾಗುವುದು. ಸೂರ್ಯಕಾಂತಿ ಉತ್ಪನ್ನವನ್ನು 24-08-2024 ರಿಂದ ಅನ್ವಯವಾಗುವಂತೆ 90 ದಿನಗಳವರೆಗೆ ಬೆಳಿಗ್ಗೆ 09 ಗಂಟೆಯಿAದ ಸಂಜೆ 05 ಗಂಟೆವರೆಗೆ ಮಾತ್ರ ಖರೀದಿಸಲಾಗುವುದು. ಸರ್ಕಾರಿ ರಜೆ ದಿನಗಳನ್ನು ಹೊರತುಪಡಿಸಿ ಉಳಿದ ದಿನಗಳಲ್ಲಿ ಖರೀದಿಸಲಾಗುವುದು.
ಮಧ್ಯವರ್ತಿಗಳ ಮೊರೆ ಹೋಗಬಾರದು: ವಿಜಯನಗರ ಜಿಲ್ಲೆಯ ರೈತರು ಬೆಂಬಲ ಬೆಲೆ ಯೋಜನೆಯ ಸದುಪಯೋಗಪಡಿಸಿಕೊಳ್ಳಬೇಕು. ಯಾವುದೇ ಸಂದರ್ಭದಲ್ಲಿ ರೈತರು ಮಧ್ಯವರ್ತಿಗಳ ಮೊರೆ ಹೋಗಬಾರದು. ಇದರ ಸದುಪಯೋಗವನ್ನು ರೈತರೇ ನೇರವಾಗಿ ಪಡೆಯಬೇಕು. ಖರೀದಿ ಕೇಂದ್ರದಲ್ಲಿ ನಿಗದಿತ ಸಾಮಾಜಿಕ ಅಂತರ ಮತ್ತು ನೈರ್ಮಲ್ಯ ಕಾಪಾಡುವುದು ಹಾಗೂ ವೈರಾಣು ಹರಡುವಿಕೆ ತಡೆಗಟ್ಟುವ ಬಗ್ಗೆ ಕೇಂದ್ರ/ರಾಜ್ಯ ಸರ್ಕಾರವು ನೀಡಿರುವ ಸೂಚನೆಯನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಕೋರಲಾಗಿದೆ.
ಬೇಕಾಗುವ ದಾಖಲಾತಿಗಳು: ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಎಫ್.ಎ.ಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿಗೆ ಕೆಲವು ದಾಖಲೆಗಳ ಅಗತ್ಯವಿರುತ್ತದೆ. 2024-25ನೇ ಸಾಲಿನ ಪಹಣಿ ಪತ್ರ., ರೈತರು ತಮ್ಮ ಹೆಸರನ್ನು ಫ್ರೂö್ಯಟ್ಸ್ (ಈಖUIಖಿS) ತಂತ್ರಾAಶದಲ್ಲಿ ನೋಂದಾಯಿಸಿರಬೇಕು ಹಾಗೂ ಎಫ್ಐಡಿ( ಈIಆ) ಯನ್ನು ಪಡೆಯುವುದು ಕಡ್ಡಾಯ., ರೈತರಲ್ಲಿ ಫ್ರೂö್ಯಟ್ಸ್ ಐಡಿ (ಈಖUIಖಿS Iಆ) ಇಲ್ಲದೇ ಇದ್ದಲ್ಲಿ ಅಥವಾ ಫ್ರೂö್ಯಟ್ಸ್ (ಈಖUIಖಿS) ನಲ್ಲಿ ಯಾವುದಾದರು ತಾಂತ್ರಿಕ ದೋಷವಿದ್ದಲ್ಲಿ ರೈತರು ಕೃಷಿ ಇಲಾಖೆಯನ್ನು ಸಂಪರ್ಕಿಸಿ ಅವಶ್ಯಕ ಮಾಹಿತಿಯನ್ನು ಪಡೆಯಬೇಕು. ಆಧಾರ್ ಕಾರ್ಡ್ ನೀಡಬೇಕು., ಬ್ಯಾಂಕ್ ಖಾತೆ (ಆಧಾರದ ಕಾರ್ಡ್ ನೊಂದಿಗೆ ಜೋಡಣೆಗೊಂಡ) ಪುಸ್ತಕದ ನಕಲು ಪ್ರತಿ ನೀಡಬೇಕು.
ಖರೀದಿ ಕೇಂದ್ರದ ವಿಳಾಸ, ಏಜನ್ಸಿ ವಿವರ: ಎಣ್ಣೇ ಬೀಜ ಬೆಳೆಗಾರರ ಸಹಕಾರ ಸಂಘ ನಿಯಮಿತ, ಇಟಗಿ ಗ್ರಾಮ, ತಾ. ಹೂವಿನಹಡಗಲಿ ಕಾರ್ಯದರ್ಶಿ:ಚಂದ್ರಪ್ಪ-9902812417., ಎಣ್ಣೇ ಬೀಜ ಬೆಳೆಗಾರರ ಸಹಕಾರ ಸಂಘ ನಿಯಮಿತ, ನಂದಿಬೇವೂರು ಗ್ರಾಮ ತಾ.ಹರಪನಹಳ್ಳಿ, ಕಾರ್ಯದರ್ಶಿ: ಸುರೇಶ – 9902128437., ಎಣ್ಣೇ ಬೀಜ ಬೆಳೆಗಾರರ ಸಹಕಾರ ಸಂಘ ನಿಯಮಿತ, ನಂದಿಬೇವೂರು ಗ್ರಾಮ ತಾ. ಹರಪನಹಳ್ಳಿ, ಕಾರ್ಯದರ್ಶಿ: ಸುರೇಶ– 9902128437., ಎಣ್ಣೇ ಬೀಜ ಬೆಳೆಗಾರರ ಸಹಕಾರ ಸಂಘ ನಿಯಮಿತ, ಉಪನಾಯಕನಹಳ್ಳಿ ತಾ.ಹಗರಿಬೊಮ್ಮನಹಳ್ಳಿ, ಕಾರ್ಯದರ್ಶಿ: ಕೃಷ್ಣಪ್ಪ-7899891663., ಎಣ್ಣೇ ಬೀಜ ಬೆಳೆಗಾರರ ಸಹಕಾರ ಸಂಘ ನಿಯಮಿತ, ಹುರುಳಿ ಹಾಳ ಗ್ರಾಮ ತಾ.ಕೂಡ್ಲಿಗಿ ಕಾರ್ಯದರ್ಶಿ ಅಜ್ಜಪ್ಪ-9880421083., ಕರ್ನಾಟಕ ಸಹಕಾರಿ ಎಣ್ಣೆ ಬೀಜ ಬೆಳೆಗಾರರ ಮಹಾ ಮಂಡಳಿ ನಿಯಮಿತ ವಿಭಾಗೀಯ ಕಚೇರಿ, ವಿಜಯನಗರ ಅಯ್ಯಪ್ಪ ಡಂಬಾಳ 8073797774.