
ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಬಿಜೆಪಿ ಯಲ್ಲಿ ರಾಜಕೀಯ ಬೆಳವಣಿಗೆ ಜೋರಾಗಿತ್ತು ಕಾಂಗ್ರೆಸ್ ಸರ್ಕಾರ ದ ಮೂಡ ಹಗರಣ. ವಾಲ್ಮೀಕಿ ಹಗರಣ ಹೀಗೆ ಸರ್ಕಾರದ ವಿರುದ್ಧ ಹರಿ ಹಾಯುತ್ತಿದ್ದ ಬಿಜೆಪಿ ನಾಯಕರು ತಮ್ಮ ಪಕ್ಷದ ಶಾಸಕ ಪ್ರಭಾವಿ ಮಾಜಿ ಮಂತ್ರಿಯ ವಿರುದ್ಧ ಜಾತಿ ನಿಂದನೆ ಮತ್ತು ಜೀವ ಬೆದರಿಕೆ ಆರೋಪ ದಡಿ ಪೊಲೀಸರು ಶನಿವಾರ ಕೋಲಾರದ ಮುಳಬಾಗಿಲು ಬಳಿ ಅವರನ್ನು ತಡೆದು ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣ ಕಾಂಗ್ರೆಸಿಗರಿಗೆ ಒಂದು ಅಸ್ತ್ರ ಸಿಕ್ಕಂತಾಗಿದೆ.
ಜೀವ ಬೆದರಿಕೆ, ಜಾತಿ ನಿಂದನೆ ಆರೋಪದಲ್ಲಿ ಬಂಧಿಸಲ್ಪಟ್ಟ ಆರ್ಆರ್ ನಗರ ವಿಧಾನಸಭಾ ಕ್ಷೇತ್ರದ ಶಾಸಕ ಮುನಿರತ್ನ ಅವರನ್ನು ನ್ಯಾಯಾಲಯ ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ.
ಮುನಿರತ್ನ ಅವರನ್ನು ಪೊಲೀಸರು ಶನಿವಾರ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ ಗ್ರಾಮದ ಬಳಿ ಬಂಧಿಸಿದ್ದು, ರಾತ್ರಿ ಆರೋಗ್ಯ ತಪಾಸಣೆ ನಡೆಸಿ, ಬಳಿಕ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಗಿತ್ತು.ಈ ಸಂದರ್ಭ ಪೊಲೀಸರು ಅವರನ್ನು ಒಂದು ವಾರ ತಮ್ಮ ಕಸ್ಟಡಿಗೆ ನೀಡುವಂತೆ ನ್ಯಾಯಾಧೀಶರುಗೆ ಮನವಿ ಮಾಡಿದರಾದರೂ ವಿಚಾರಣೆ ನಡೆಸಿದ ನ್ಯಾಯಾಧೀಶರು ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ನೀಡಿದ್ದಾರೆ. ಇದಕ್ಕೂ ಮುನ್ನ ಪೊಲೀಸರು ಶಾಸಕ ಮುನಿರತ್ನ ಅವರನ್ನು ಅಶೋಕ್ನಗರ ಠಾಣೆಗೆ ಕರೆತಂದು ಮಧ್ಯರಾತ್ರಿ 12 ರಿಂದ 1.30ರವರೆಗೆ ಸತತ ಒಂದುವರೆ ಗಂಟೆಗಳ ಕಾಲ ವಿಚಾರಣೆ ನಡೆಸಿದರು.
ಮುನಿರತ್ನಗೆ ಶಾಕ್ ಮೇಲೆ ಶಾಕ್ : ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ. ದಲಿತ ಸಮುದಾಯಕ್ಕೆ ಅವಮಾನ ಮಾಡಿರುವ ಬಗ್ಗೆ ಕಾನೂನು ಕ್ರಮಕ್ಕೆ ಆಗ್ರಹಿಸಿ ಮೈಸೂರಿನಲ್ಲಿ ದೂರು ದಾಖಲಾಗಿದೆ.
ಮೈಸೂರಿನ ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ದಲಿತರು ಮತ್ತು ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆಗಳ ಬಗ್ಗೆ ಶಾಸಕ ಮುನಿರತ್ನ ಕಟುವಾಗಿ ಮಾತನಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಮುನಿರತ್ನ ವಿರುದ್ಧ ಕ್ರಮ ಕೈಗೊಳ್ಳುವಂತೆ ದಲಿತ ಮುಖಂಡರು ಪತ್ರದ ಮೂಲಕ ದೂರು ನೀಡಿದ್ದಾರೆ.
ಶಾಸಕ ಮುನಿರತ್ನ ವಿರುದ್ಧ ಕೊಲೆ ಬೆದರಿಕೆ ಹಾಗೂ ಜಾತಿ ನಿಂದನೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಬಂಧಿಸಿದ್ದಾರೆ. ಜತೆಗೆ ಮತ್ತೊಂದು ಪ್ರಕರಣ ದಾಖಲಾಗಿದೆ.