
ಹಗರಿಬೊಮ್ಮನಹಳ್ಳಿ: ಇತ್ತೀಚೆಗ ನಡೆದ ಮಂಡ್ಯದ ನೆಲಮಂಗಲದಲ್ಲಿ ನಡೆದ ಗಣಪತಿ ಉತ್ಸವದ ಸಂದರ್ಭದಲ್ಲಿ ಕಲ್ಲು ತೂರಾಟ ಘಟನೆ ರಾಜ್ಯಾದ್ಯಂತ ಸುದ್ದಿ ಆಗಿತ್ತು ಈ ರೀತಿಯ ಘಟನೆ ಆಗದಂತೆ ಪೊಲೀಸ್ ಇಲಾಖೆಯಿಂದ ದಿನಾಂಕ 17/ 9/ 2024 ರಂದು ಹಗರಿಬೊಮ್ಮನಹಳ್ಳಿಯ ಪ್ರತಿಷ್ಠಿತ ಗಣಪತಿ ಆದ ಹಿಂದೂ ಮಹಾ ಗಣಪತಿಯ ವಿಸರ್ಜನಾ ಕಾರ್ಯಕ್ರಮವನ್ನು ಇಂದು ನಡೆಸಲಾಯಿತು ಪೊಲೀಸ್ ಸರ್ಪಗಾವಲಿನಲ್ಲಿ ಡಿಜೆ ವಾದ್ಯ ಮೇಳಗಳೊಂದಿಗೆ ನಗರದ ಪ್ರಮುಖ ಬೀದಿಗಳಲ್ಲಿ ಸಾಗಿತು.
ಶಾಸಕ ನೇಮಿರಾಜ್ ನಾಯ್ಕ್ ಭಾಗಿ: ಹಿಂದೂ ಮಹಾಗಣಪತಿಯ ಮೆರವಣಿಗೆ ಶಾಸಕರಾದ ನೇಮರಾಜ್ ನಾಯಕ ಅವರು ಭಾಗವಹಿಸಿದ್ದರು ಅವರೊಂದಿಗೆ ಜೆಡಿಎಸ್ ಕಾರ್ಯಕರ್ತರು ಕೂಡ ಭಾಗವಹಿಸಿದ್ದರು.

ಕುಡಿಯುವ ನೀರಿನ ಹಂಚಿಕೆ : ಮೆರವಣಿಗೆಯಲ್ಲಿ ಭಾಗವಹಿಸಿದವರಿಗೆ ಈ ಬಾರಿ ಕುಡಿಯುವ ನೀರಿನ ವ್ಯವಸ್ಥೆಯನ್ನು ಮಾಡಲಾಗಿತ್ತು.

ಈ ಸಂದರ್ಭದಲ್ಲಿ ಡಿವೈಎಸ್ಪಿ ಮಲ್ಲೇಶಪ್ಪ ಅವರ ನೇತೃತ್ವದಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಅನ್ನು ಕೈಗೊಂಡಿದ್ದರು.