
ಹಗರಿಬೊಮ್ಮನಹಳ್ಳಿ, : ತಾಲೂಕಿನ ಪಿಎಲ್ಡಿ ಬ್ಯಾಂಕ್ ವಸೂಲಾತಿಯಲ್ಲಿ ವಿಜಯನಗರ “ ಜಿಲ್ಲೆಗೆ ಪ್ರಥಮಸ್ಥಾನ ಪಡೆದಿದ್ದು ಬೆಂಗಳೂರಿನಲ್ಲಿ ನಮ್ಮ ಬ್ಯಾಂಕ್ಗೆ ಪ್ರಶಸ್ತಿ ಪ್ರಧಾನ ಮಾಡಲಾಯಿತು ಎಂದು ಬ್ಯಾಂಕ್ನ ವ್ಯವಸ್ಥಾಪಕ ಶಿವಕವಿ ತಿಪ್ಪೇಶ್ ಸ್ವಾಮಿ ಹೇಳಿದರು.
ಪಟ್ಟಣದಲ್ಲಿ ಅವರು ಪತ್ರಿಕೆಯೊಂದಿಗೆ ಮಾತನಾಡಿ ಬ್ಯಾಂಕ್ ಮತ್ತು ವ್ಯವಸ್ಥಾಪಕ ಸಿಬ್ಬಂದಿಯ ಪ್ರಯತ್ನದಿಂದ ಶೇಕಡ 93ರಷ್ಟು ಸಾಲ ವಸೂಲಾತಿಯಾಗಿದೆ. 2024-25ರಲ್ಲಿ ಕೃಷಿ ವಿಭಾಗಕ್ಕೆ 4ಕೋಟಿ, ವ್ಯಾಪಾರ ಅಭಿವೃದ್ಧಿಗೆ 2 ಕೋಟಿ ಸೇರಿದಂತೆ ಒಟ್ಟು 6 ಕೋಟಿ ಸಾಲ ನೀಡುವ ಗುರಿಯನ್ನು ಹೊಂದಿದ್ದೇವೆ. ಈ ಪ್ರಶಸ್ತಿಯಿಂದ ನಮ್ಮ ಜವಾಬ್ದಾರಿ ಹೆಚ್ಚಾಗಿದ್ದು ಮುಂದಿನ ದಿನಗಳಲ್ಲಿ ಬ್ಯಾಂಕ್ ಅಭಿವೃದ್ಧಿಗೆ ಸರ್ವ ಸದಸ್ಯರೊಂದಿಗೆ ಯೋಜನೆಗಳನ್ನು ರೂಪಿಸಲಾಗುವುದು ಎಂದರು. ಬ್ಯಾಂಕ್ನ ಅಧ್ಯಕ್ಷ ಬಿ.ಗಂಗಾಧರ ಮಾತನಾಡಿ ಸಣ್ಣ ಪುಟ್ಟ ವ್ಯಾಪಾರಸ್ತರಿಗೆ ನೀಡುವ ಬಳಕೆ ಸಾಲದ ಮಿತಿಯನ್ನು ಮುಂದಿನ ದಿನಗಳಲ್ಲಿ ಚರ್ಚಿಸಿ ಹೆಚ್ಚಿಸುವ ಕ್ರಮ ಕೈಗೊಳ್ಳುತ್ತೇವೆ. ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ನಮ್ಮ ಬ್ಯಾಂಕ್ ನಮ್ಮ ಹೆಮ್ಮೆ ಎಂದರು.