ವಾರ್ತಾ ಇಲಾಖೆಯ ಬಾಪೂಜಿ ಪ್ರಬಂಧ ಸ್ಪರ್ಧೆ: ಫಲಿತಾಂಶ ಪ್ರಕಟ

Loading

ಹೊಸಪೇಟೆ (ವಿಜಯನಗರ) : ರಾಷ್ಟçಪಿತ ಮಹಾತ್ಮ ಗಾಂಧೀಜಿಯವರ 155ನೇ ಜಯಂತಿ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ವಿಜಯನಗರ ಜಿಲ್ಲೆಯಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯ ಫಲಿತಾಂಶವನ್ನು ಪ್ರಕಟಿಸಲಾಗಿದೆ ಎಂದು ಜಿಲ್ಲಾ ವಾರ್ತಾಧಿಕಾರಿ ಗವಿಸಿದ್ದಪ್ಪ ಹೊಸಮನಿ ಅವರು ತಿಳಿಸಿದ್ದಾರೆ.


ಮಹಾತ್ಮ ಗಾಂಧೀಜಿಯರ ಬದುಕು, ಸ್ವಾತಂತ್ರö್ಯ ಚಳುವಳಿ, ಅಹಿಂಸಾ ಮಾರ್ಗ, ಅಸ್ಪೃಶ್ಯತೆ ನಿವಾರಣೆಗಾಗಿ ನಡೆಸಿದ ಪ್ರಯೋಗಗಳ ಇತ್ಯಾದಿ ವಿಚಾರಗಳ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲು ಪ್ರೌಢಶಾಲೆ, ಪಿಯುಸಿ ಮತ್ತು ಪದವಿ ಸ್ನಾತಕೋತ್ತರ-ಪದವಿ ವಿಭಾಗದಲ್ಲಿ ವಿಜಯನಗರ ಜಿಲ್ಲೆಯಲ್ಲಿ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಆಯೋಜಿಸಲಾಗಿತ್ತು.


ಬಾಪೂಜಿ ಪ್ರಬಂಧ ಸ್ಪರ್ಧೆಯ ವಿಜೇತರಿಗೆ ಅಕ್ಟೋಬರ್ 10ರಂದು ನಡೆಯುವ ಮಹಾತ್ಮ ಗಾಂಧೀಜಿ ಜಯಂತಿಯ ವಿಶೇಷ ಕಾರ್ಯಕ್ರಮದಲ್ಲಿ ಪ್ರತಿ ವಿಭಾಗದಲ್ಲಿ ತಲಾ ಮೂರು ಬಹುಮಾನ ನೀಡಲಾಗುವುದು. ಪ್ರಥಮ 3000 ರೂ., ದ್ವಿತೀಯ 2000 ರೂ ಮತ್ತು ತೃತೀಯ 1000 ರೂ.ನಗದು ಬಹುಮಾನ ನೀಡಲಾಗುವುದು.
ಪ್ರೌಢಶಾಲೆ ವಿಭಾಗ: ಪ್ರೌಢಶಾಲೆ ವಿಭಾಗದಲ್ಲಿ ಕೊಟ್ಟೂರು ತಾಲ್ಲೂಕಿನ ಕಂದಗಲ್‌ನ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಪಿ.ಭರತ್ ಕುಮಾರ್ ಪ್ರಥಮ ಸ್ಥಾನ, ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ವಟ್ಟಮ್ಮನಹಳ್ಳಿ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ವೀಣಾ.ಹೆಚ್ ದ್ವಿತೀಯ ಸ್ಥಾನ, ಹರಪ್ಪನಹಳ್ಳಿ ತಾಲ್ಲೂಕಿನ ಹಗರಿಗಜಾಪುರ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಕೆ.ಉಷಾ ತೃತೀಯ ಸ್ಥಾನ ಪಡೆದಿದ್ದಾರೆ.


ಪದವಿಪೂರ್ವ ಶಿಕ್ಷಣ ವಿಭಾಗ: ಪದವಿ ಪೂರ್ವ ಶಿಕ್ಷಣ ವಿಭಾಗದಲ್ಲಿ ಕೊಟ್ಟೂರಿನ ಎಸ್.ಜಿ.ಎಸ್ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಭವಾನಿ.ಎಂ ಪ್ರಥಮ ಸ್ಥಾನ, ಹೂವಿನಹಡಗಲಿ ತಾಲ್ಲೂಕಿನ ಹಿರೇಹಡಗಲಿಯ ವಿ.ಕೆ.ಕೆ.ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ರಿಯಾನಾ ಪಿಂಜಾರ ದ್ವಿತೀಯ ಸ್ಥಾನ, ಮರಿಯಮ್ಮನಹಳ್ಳಿಯ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅಕ್ಷತಾ ತೃತೀಯ ಸ್ಥಾನ ಪಡೆದಿದ್ದಾರೆ.


ಪದವಿ-ಸ್ನಾತಕೋತ್ತರ ಪದವಿ ವಿಭಾಗ: ಪದವಿ-ಸ್ನಾತಕೋತ್ತರ ಪದವಿ ವಿಭಾಗದಲ್ಲಿ ಹಂಪಿ ಕನ್ನಡ ವಿಶ್ವವಿದ್ಯಾಲಯದ ಕನ್ನಡ ಸಾಹಿತ್ಯ ಅಧ್ಯಯನ ವಿಭಾಗದ ಪ್ರವೀಣ್ ನಿಂಗಪ್ಪ ಕಿತ್ತೂರು ಪ್ರಥಮ ಸ್ಥಾನ, ಹೊಸಪೇಟೆಯ ಶಂಕರ್ ಆನಂದ್ ಸಿಂಗ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಬಿ.ಎಸ್ಸಿ ವಿದ್ಯಾರ್ಥಿನಿ ಬಿ.ಕಲ್ಪನಾ ದ್ವೀತಿಯ ಸ್ಥಾನ, ಹಂಪಿ ಕನ್ನಡ ವಿಶ್ವವಿದ್ಯಾಲಯದ ಕನ್ನಡ ಭಾಷಾ ಅಧ್ಯಯನ ವಿಭಾಗದ ಶೀತಲ್ ಬೇಕ್ಟಾಡಕರ್ ತೃತೀಯ ಸ್ಥಾನ ಪಡೆದಿದ್ದಾರೆ.

Leave a Reply

Your email address will not be published. Required fields are marked *