
ಹೊಸಪೇಟೆ (ವಿಜಯನಗರ) : ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತ್ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವ ಕಾರ್ಯಕ್ರಮವು ಅಕ್ಟೋಬರ್ 17ರಂದು ಬೆಳಗ್ಗೆ 10 ಗಂಟೆಗೆ ಹೊಸಪೇಟೆ ಭುವನೇಶ್ವರಿ ನಗರದ ಮಹರ್ಷಿ ವಾಲ್ಮೀಕಿ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವರು ಹಾಗೂ ವಿಜಯನಗರ ಮತ್ತು ಬಳ್ಳಾರಿ ಜಿಲ್ಲೆಗಳ ಉಸ್ತುವಾರಿ ಸಚಿವರಾದ ಬಿ.ಜೆಡ್. ಜಮೀರ್ ಅಹ್ಮದ್ ಖಾನ್ ಅವರು ಉದ್ಘಾಟಿಸುವರು.
ವಿಜಯನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಹೆಚ್.ಆರ್. ಗವಿಯಪ್ಪ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಸಂಸದರಾದ ಈ.ತುಕಾರಾಂ ಹಾಗೂ ಡಾ.ಪ್ರಭಾ ಮಲ್ಲಿಕಾರ್ಜುನ, ಶಾಸಕಾರಾದ ಕೆ.ನೇಮಿರಾಜ ನಾಯ್ಕ, ಎನ್.ಟಿ.ಶ್ರೀನಿವಾಸ್, ಎಲ್.ಕೃಷ್ಣನಾಯಕ, ಎಂ.ಪಿ.ಲತಾ ಮಲ್ಲಿಕಾರ್ಜುನ ಹಾಗೂ ಬಿ.ದೇವೇಂದ್ರಪ್ಪ, ವಿಧಾನ ಪರಿಷತ್ ಸದಸ್ಯರಾದ ಡಾ.ಚಂದ್ರಶೇಖರ ಬಿ.ಪಾಟೀಲ್, ಶಶೀಲ್ ಜಿ. ನಮೋಶಿ ಹಾಗೂ ವೈ.ಎಂ. ಸತೀಶ್, ಹೊಸಪೇಟೆ ನಗರಸಭೆ ಅಧ್ಯಕ್ಷರಾದ ರೂಪೇಶ್ ಕುಮಾರ ಎನ್., ಹೊಸಪೇಟೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್.ಎನ್.ಎಫ್ ಇಮಾಮ್ ನಿಯಾಜಿ ಅವರು ಹಾಗೂ ಜಿಲ್ಲಾಧಿಕಾರಿಗಳಾದ ಎಂ.ಎಸ್.ದಿವಾಕರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ನೋಂಗ್ಜಾಯ್ ಮೋಹಮ್ಮದ್ ಅಲಿ ಅಕ್ರಮ್ ಷಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಶ್ರೀಹರಿ ಬಾಬು ಬಿ.ಎಲ್, ಜಿಲ್ಲಾ ಪರಿಶಿಷ್ಠ ವರ್ಗಗಳ ಕಲ್ಯಾಣಾಧಿಕಾರಿಗಳಾದ ಶಾಷು ಮೋದಿನ್ ಅವರು ಉಪಸ್ಥಿತರಿರುವರು.
ಅಗ್ನಿಶಾಮಕದಳದ ಡಿ.ಐ.ಜಿ.ಪಿ ಗಳಾದ ರವಿ ಡಿ. ಚನ್ನಣ್ಣನವರ್ ಅವರು ವಿಶೇಷ ಉಪನ್ಯಾಸ ನೀಡುವರು ಎಂದು ಪ್ರಕಟಣೆ ತಿಳಿಸಿದೆ.