ಉಪ ಚುನಾವಣೆಗೆ ಸಿದ್ಧ ಎಂದ ಸಿ.ಎಂ.ಸಿದ್ದು

Loading

ಬೆಂಗಳೂರು : ಮೂರು ಕ್ಷೇತ್ರಗಳ ಉಪ ಚುನಾವಣೆಗೆ ನಾವು ಸಿದ್ಧರಾಗಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಉಪಚುನಾವಣೆ ಎದುರಿಸಲು ನಾವು ಸಿದ್ಧರಾಗಿದ್ದೇವೆ. ಚುನಾವಣೆಗೆ ಎಲ್ಲಾ ತಯಾರಿ ಮಾಡಿಕೊಂಡಿದ್ದೇವೆ. ಉಪಚುನಾವಣೆಯನ್ನು ಸಮರ್ಥವಾಗಿ ಎದುರಿಸುತ್ತೇವೆ ಎಂದರು.

ರಾಜ್ಯಕ್ಕೆ ತೆರಿಗೆ ಅನ್ಯಾಯ ವಿಚಾರ ಮತ್ತೆ ದೆಹಲಿಯಲ್ಲಿ ಪ್ರತಿಭಟನೆ ಮಾಡೋ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕೇಂದ್ರದ ವಿರುದ್ಧ ದೆಹಲಿಯಲ್ಲಿ ಪ್ರತಿಭಟನೆ ಮಾಡೋ ವಿಚಾರ ಸದ್ಯಕ್ಕೆ ಚರ್ಚೆ ಆಗಿಲ್ಲ. ಪ್ರತಿಭಟನೆ ಮಾಡೋ ಬಗ್ಗೆ ಚರ್ಚೆ ಮಾಡಿ ತೀರ್ಮಾನ ಮಾಡುತ್ತೇವೆ ಅಂತ ತಿಳಿಸಿದರು.

Leave a Reply

Your email address will not be published. Required fields are marked *