ಕನ್ನಡ ರಾಜ್ಯೋತ್ಸವ ಆಚರಣೆ

Loading

ಕೊಟ್ಟೂರು : ತಾಲ್ಲೂಕು ಪಂಚಾಯತ್ ಕಚೇರಿಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.
ಕೊಟ್ಟೂರು ತಾಲೂಕು ಪಂಚಾಯಿತಿಯ ಕಾರ್ಯನಿರ್ವಾಹಕ ಅಧಿಕಾರಿಗಳಾದ
ಮಾನ್ಯ ಶ್ರೀ ಬಾಳಪ್ಪನವರ ಆನಂದಕುಮಾರ್ ರವರು ರಾಷ್ಟ್ರ ಧ್ವಜಾರೋಹಣವನ್ನು ನೆರವೇರಿಸಿದರು.
ಬಳಿಕ ಮಾತನಾಡಿದ ಅವರು, ಕನ್ನಡ ಭಾಷೆ, ನಾಡು, ನುಡಿಯ ರಕ್ಷಣೆಗೆ ನಾವೆಲ್ಲರೂ ಕಂಕಣಬದ್ಧರಾಗಿ ಕಾರ್ಯನಿರ್ವಹಿಸೋಣ ಎಂದರು.


ಈ ಸಂದರ್ಭದಲ್ಲಿ ಕೊಟ್ಟೂರು ತಾಲೂಕು ಪಂಚಾಯಿತಿಗೆ ಸರ್ಕಾರದಿಂದ ನಾಮನಿರ್ದೇಶಿತರಾಗಿ ನೇಮಕಗೊಂಡಿರುವ ಶ್ರೀ ಪರುಸಪ್ಪ ಕಂದಗಲ್ಲು, ಎಸ್.ಗಂಗಾಧರಪ್ಪ, ಶ್ರೀ ಎ.ಎಂ.ಹಾಲಯ್ಯ, ಶ್ರೀ ಎಸ್. ಕೊಡದಪ್ಪ ಉಜ್ಜಿನಿ, ಶ್ರೀ ಅಣ್ಣೀಗೆರೆ ಬುಡೇನ್ ಸಾಬ್, ಸಹಾಯಕ ನಿರ್ದೇಶಕರು (ಗ್ರಾ.ಉ) ಶ್ರೀ ಎಚ್. ವಿಜಯಕುಮಾರ್, ವ್ಯವಸ್ಥಾಪಕರಾದ ಶ್ರೀಮತಿ ಪುಷ್ಪಲತಾ, ತಾಲೂಕು ಪಂಚಾಯಿತಿಯ ಎಲ್ಲಾ ಸಿಬ್ಬಂದಿಗಳು, ನರೇಗಾ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *