
ಹಗರಿಬೊಮ್ಮನಹಳ್ಳಿ : ದಿನಾಂಕ:09.11.2024ರಂದು ಸ್ಥಳ: ಸರ್ಕಾರಿ ಜಿ ವಿ ವಿ ಪಿ ಕಾಲೇಜ್ ಹಗರಿಬೊಮ್ಮನಹಳ್ಳಿಯಲ್ಲಿ ತಾಲೂಕು ಕಾನೂನು ಸೇವಗಳ ಸಮಿತಿ, ವಕೀಲರ ಸಂಘ ಮತ್ತು ಜಿ ವಿ ವಿ ಪಿ ಕಾಲೇಜ್ ಹಗರಿಬೊಮ್ಮನಹಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆ ನಿಮಿತ್ತ ಮಾನ್ಯ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಅಧ್ಯಕ್ಷರು ತಾಲೂಕು ಕಾನೂನು ಸೇವೆಗಳ ಸಮಿತಿ ಹಗರಿಬೊಮ್ಮನಹಳ್ಳಿ ಮಾನ್ಯ ಶ್ರೀ ಮಧುಸೂದನ ರವರು ಸದರಿ ಕಾರ್ಯಕ್ರಮವನ್ನು ಸಸಿಗೆ ನೀರನ್ನು ಹಾಕುವುದರ ಮೂಲಕ ಉದ್ಘಾಟನೆ ಮಾಡಿ, ಉದ್ಘಾಟನೆ ಭಾಷಣದಲ್ಲಿ
ಉಚಿತ ಕಾನೂನು ನೆರವನ್ನು ಯಾರು ಪಡೆಯಬಹುದು?

1.ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದವರು:
2. ಮಹಿಳೆಯರು ಮತ್ತು ಮಕ್ಕಳು;
3. ಕಾರ್ಖಾನೆಯ ಕಾರ್ಮಿಕರು;
4. ಗುಂಪು ಘರ್ಷಣೆ, ಗಲಭೆ, ಪ್ರವಾಹ, ಕ್ಷಾಮ, ಭೂಕಂಪ, ಕೈಗಾರಿಕಾ ವಿನಾಶ ಮುಂತಾದವುಗಳಿಗೆ ತುತ್ತಾದವರು;
5. ಮತೀಯ ಕಾರಣದಿಂದ ದೌರ್ಜನ್ಯಕ್ಕೆ ಬಲಿಯಾದವರು;
6. ಮಾನಸಿಕ ಅಥವಾ ಬೇರೆ ಯಾವುದೇ ನ್ಯೂನತೆ ಹೊಂದಿರುವವರು;
7. ರಕ್ಷಣಾ ಗೃಹ, ಮನೋರೋಗಿಗಳ ಆಸ್ಪತ್ರೆ ಮುಂತಾದವುಗಳಲ್ಲಿ ಅಭಿರಕ್ಷೆಯಲ್ಲಿರುವವರು;
8. ದೈಹಿಕ ವ್ಯಾಪಾರ ಅಥವಾ ಜೀತಕ್ಕೊಳಗಾದವರು
9. ವಾರ್ಷಿಕ ಮೂರು ಲಕ್ಷ ರೂಪಾಯಿಗಳಿಗಿಂತ ರೂ.3,00,000/-)ಕಡಿಮೆ ಆದಾಯ ಇರುವ ಎಲ್ಲಾ ವರ್ಗದ ಜಾತಿಯ ಜನರು ಪಡೆದುಕೊಳ್ಳಬಹುದಾಗಿದೆ ಎಂದು ತಮ್ಮ ಉದ್ಘಾಟನೆ ಭಾಷಣದಲ್ಲಿ ತಿಳಿಸಿದರು.
ಸದರಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಶ್ರೀ ಶ್ರೀನಿವಾಸ ಎಂಎಸ್, ವಕೀಲರು, ಭಾರತದ ಸಂವಿಧಾನದ 14 ನೇ ವಿಧಿಯಾದ ಕಾನೂನಿನ ದೃಷ್ಟಿಯಲ್ಲಿ ಎಲ್ಲರೂ ಸಮಾನರೂ ಎಂದು ಹಾಗೂ “Ignorance of the law is no excuse “
ಉಚಿತ ಕಾನೂನು ನೆರವನ್ನು ಎಲ್ಲಿ ಪಡೆಯಬಹುದು?
ರಾಷ್ಟ್ರೀಯ ಮಟ್ಟದಲ್ಲಿ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ದೆಹಲಿ, ರಾಜ್ಯ ಮಟ್ಟದಲ್ಲಿ ಕರ್ನಾಟಕ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು, ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ, ತಾಲೂಕು ಕಾನೂನು ಸೇವೆಗಳ ಸಮಿತಿಯಲ್ಲಿ ಪಡೆಯಬಹುದು ಎಂದು ಈ ಉಪನ್ಯಾಸದಲ್ಲಿ ತಿಳಿಸಿರುತ್ತಾರೆ.
ಸದರಿ ಕಾರ್ಯಕ್ರಮದಲ್ಲಿ ಶ್ರೀ ಬಸವರಾಜ್, ಪ್ರಾಂಶುಪಾಲರು ಜಿ ವಿ ಪಿ ಕಾಲೇಜ್ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದರು
ಸದರಿ ಕಾರ್ಯಕ್ರಮದಲ್ಲಿ ಶ್ರೀ ಎಸ್ ಜಿ ನಾಗರಾಜ್ ನಿರೂಪಣೆಯನ್ನು ಮಾಡಿರುತ್ತಾರೆ.
ಸದರಿ ಕಾರ್ಯಕ್ರಮದಲ್ಲಿ ವಕೀಲರ ಸಂಘದ ಅಧ್ಯಕ್ಷರು ಶ್ರೀ ಪಿ ರಮೇಶ್, ಕಾಲೇಜಿನ ಪ್ರಾಧ್ಯಾಪಕರು ಹಾಗೂ ಮಕ್ಕಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.