
ಬಳ್ಳಾರಿ : ಬಾಣಂತಿಯರ ಸರಣಿ ಸಾವಿನ ಹಿನ್ನೆಲೆಯಲ್ಲಿ ವಿರೋಧಪಕ್ಷದ ನಾಯಕ ಆರ್.ಅಶೋಕ್ ರವರ ನೇತೃತ್ವದಲ್ಲಿ ಇಂದು ಬಳ್ಳಾರಿಯ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರೊಂದಿಗೆ ಪರಿಶೀಲನೆ ನಡೆಸಿ, ರೋಗಿಗಳು ಮತ್ತು ಸಂಬಂಧಿಕರ ಅಹವಾಲು ಸ್ವೀಕರಿಸಿದೆವು.
ಬಾಣಂತಿಯರ ವಾರ್ಡ್, ಆಪರೇಷನ್ ಥಿಯೇಟರ್, ಮೆಡಿಕಲ್, ಔಷಧಿಗಳು, ಜಿಲ್ಲಾ ಶಸ್ತ್ರಚಿಕಿತ್ಸಕರು, ಮುಖ್ಯ ವೈದ್ಯರು ಹಾಗೂ ಸಿಬ್ಬಂದಿಗಳೊಂದಿಗೆ ಪರಿಶೀಲನೆ ನಡೆಸಿ ಮಾಹಿತಿ ಪಡೆದು, ಪತ್ರಿಕಾಗೋಷ್ಠಿ ನಡೆಸಿ ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರ ನೀಡಬೇಕು ಮತ್ತು ಪ್ರಕರಣವನ್ನು ಲೋಕಾಯುಕ್ತರಿಂದ ತನಿಖೆ ಮಾಡಬೇಕೆಂದು ಸರ್ಕಾರಕ್ಕೆ ಆಗ್ರಹಿಸಿದೆವು.

ಇದೇ ಸಂದರ್ಭದಲ್ಲಿ ಎಸ್.ಟಿ ಮೋರ್ಚ ರಾಜ್ಯಾಧ್ಯಕ್ಷರಾದ ಬಂಗಾರ ಹನುಮಂತ, ರಾಜ್ಯಾ ಕಾರ್ಯದರ್ಶಿಗಳಾದ ಕೆ.ಎಸ್ ದಿವಾಕರ್, ಜಿಲ್ಲಾಧ್ಯಕ್ಷರಾದ ಅನಿಲ್ ಕುಮಾರ್ ಮೋಕ, ಡಾ.ಮಹಿಪಾಲ್, ಡಾ.ಅರುಣ, ಸಫಾಯಿ ಕರ್ಮಚಾರಿ ಮಾಜಿ ಅಧ್ಯಕ್ಷರಾದ ಹನುಮಂತಪ್ಪ, ಮಾಜಿ ಬುಡಾ ಅಧ್ಯಕ್ಷರಾದ ದಮ್ಮುರ್ ಶೇಖರ್, ಮಾಜಿ ಮೇಯರ್ ವೆಂಕಟರಮಣ, ಮಲ್ಲಿಕಾರ್ಜುನ ಆಚಾರ್ ಹಾಗೂ ಇನ್ನಿತರು ಉಪಸ್ಥಿತರಿದ್ದರು.