
ತಮಿಳುನಾಡು : ಪೆರಿಯಾರ್ ರಾಮಸ್ವಾಮಿ ಅವರ ನೇತೃತ್ವದಲ್ಲಿ ಕೇರಳದ ವೈಕಂನಲ್ಲಿ ನಡೆದಿದ್ದ ವೈಕಂ ಹೋರಾಟಕ್ಕೆ ನೂರು ವರ್ಷ ತುಂಬಿದ ಸಂದರ್ಭದಲ್ಲಿ ದೇವನೂರರಿಗೆ ಈ ಪ್ರಶಸ್ತಿ ಸಂದಿರುವುದು ಮತ್ತೊಂದು ವಿಶೇಷ.
ಕೃತಿಗಳ ಮೂಲಕವೇ ಚಳವಳಿಯನ್ನು ಕಟ್ಟಿದ ದಮನಿತರ ಗಟ್ಟಿ ಧ್ವನಿ ದೇವನೂರು ಮಹಾದೇವ ಅವರ ಬರಹ ಮತ್ತು ಬದುಕು ನಮ್ಮೆಲ್ಲರ ಸ್ಫೂರ್ತಿಯ ಸೆಲೆಯಾಗಿದೆ.
ಸಮಾಜದಲ್ಲಿ ತುಳಿತಕ್ಕೊಳಗಾದ ವರ್ಗಗಳ ಕಲ್ಯಾಣಕ್ಕಾಗಿ ಶ್ರಮಿಸಿದ ಗಣ್ಯರಿಗೆ ಕೊಡಮಾಡುವ ತಮಿಳುನಾಡು ಸರ್ಕಾರದ ಪ್ರತಿಷ್ಠಿತ “ವೈಕಂ“ ಪ್ರಶಸ್ತಿಗೆ ಭಾಜನರಾದ ಶ್ರೀ ದೇವನೂರು ಮಹಾದೇವ ಅವರಿಗೆ ಹೃದಯಪೂರ್ವಕ ಅಭಿನಂದನೆಗಳು.