ಸರ್ವಧರ್ಮಗಳ ಸಾಮೂಹಿಕ ವಿವಾಹ ಕಾರ್ಯಕ್ರಮ ದಲ್ಲಿ ಸಿ ಎಂ ಸಿದ್ದರಾಮಯ್ಯ ಭಾಗಿ

Loading

ಹಗರಿಬೊಮ್ಮನಹಳ್ಳಿ : ಸಿರಾಜ್ ಶೇಕ್ ಮಾಜಿ ಶಾಸಕರು ಅವರ ಮಗನ ಮದುವೆ ಜೊತೆ ಸರ್ವಧರ್ಮಗಳ ಸುಮಾರು 23 ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ತಮ್ಮ ತೋಟದ ಮನೆಯಲ್ಲಿ ಆಯೋಜನೆ ಮಾಡಿದರು.

ಈ ಸಂದರ್ಭದಲ್ಲಿ ಸಿ ಎಂ ಸಿದ್ದರಾಮಯ್ಯ ಅವರು ಭಾಗಿಯಾಗಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು ಸರ್ವಧರ್ಮಗಳ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಹೊಸ ಜೀವನಕ್ಕೆ ಕಾಲಿಟ್ಟಿರುವ ವಧು – ವರರಿಗೆ ಶುಭ ಹಾರೈಕೆಗಳು. ವಿವಾಹದ ಖರ್ಚು ವೆಚ್ಚಗಳನ್ನು ಭರಿಸಲಾಗದ ಬಡಕುಟುಂಬಗಳಿಗೆ ಸಾಮೂಹಿಕ ವಿವಾಹ ವರದಾನವಾಗಿದೆ. ಸರಳ ಶೈಲಿಯಲ್ಲಿ ವಿವಾಹವಾಗುವ ಪದ್ದತಿಯನ್ನು ಎಲ್ಲರೂ ಅಳವಡಿಸಿಕೊಳ್ಳಬೇಕು.
ಬಸವಣ್ಣನವರ ಕಾಲದಲ್ಲಿಯೇ ಅಂತರ್ಜಾತಿ ವಿವಾಹ ಪದ್ಧತಿ ಪ್ರಚಲಿತದಲ್ಲಿತ್ತು. ಅಂತರ್ಜಾತಿ ವಿವಾಹಗಳಿಗೆ ಹೆಚ್ಚಿನ ಪ್ರೋತ್ಸಾಹ ದೊರೆಯಬೇಕು. ಇದರಿಂದಾಗಿ ಸಮಾಜದಲ್ಲಿನ ಜಾತಿ ವ್ಯವಸ್ಥೆ ಅಳಿದು ಸಮಸಮಾಜ ನಿರ್ಮಾಣ ಸಾಧ್ಯವಾಗಲಿದೆ.


ಜಾತ್ಯತೀತ ತತ್ವವನ್ನು ನಮ್ಮ ಸಂವಿಧಾನ ಬೋಧಿಸಿದೆ. ಇದೇ ಆಶಯವನ್ನು ವ್ಯಕ್ತಪಡಿಸಿದ ಬಸವಣ್ಣವರು, ಜಾತಿ ಆಧಾರಿತ ಸಮಾಜ ವ್ಯವಸ್ಥೆ ಸಾಧುವಲ್ಲ ಎಂದು ಪ್ರತಿಪಾದಿಸಿದ್ದರು. ‘ದಯವೇ ಧರ್ಮದ ಮೂಲವಯ್ಯ’ ಎಂದು ನುಡಿದು, ಹಲವು ಉದಾತ್ತ ತತ್ವವನ್ನು ಬೋಧಿಸಿದ ಬಸವೇಶ್ವರರನ್ನು ಸರ್ಕಾರ ‘ಸಾಂಸ್ಕೃತಿಕ ನಾಯಕ’ ಎಂದು ಘೋಷಿಸಿದೆ.

ಮನುಷ್ಯ ಹುಟ್ಟುವಾಗ ವಿಶ್ವಮಾನವನಾಗಿದ್ದು, ಜಾತಿಧರ್ಮಗಳ ಬಂಧನದದಲ್ಲಿ ಸಿಲುಕಿ ಅಲ್ಪಮಾನವನಾಗುತ್ತಾನೆ. ಆದ್ದರಿಂದ ವಿಶ್ವಮಾನವರಾಗುವ ಮೂಲಕ ಸಮಾಜಕ್ಕೆ ಕೊಡುಗೆ ನೀಡಬೇಕಾಗಿದೆ.
ಹೆಣ್ಣುಮಕ್ಕಳಿಗೆ ಶಕ್ತಿತುಂಬುವ ಗ್ಯಾರಂಟಿ ಯೋಜನೆಗಳನ್ನು ಸರ್ಕಾರ ಯಶಸ್ವಿಯಾಗಿ ಜಾರಿಗೊಳಿಸಿದೆ. ಇಂದು ವಿವಾಹ ಬಂಧನಕ್ಕೊಳಗಾದ ಮಹಿಳೆಯರಿಗೂ ಸರ್ಕಾರದ ಗ್ಯಾರಂಟಿಗಳು ತಲುಪವಂತಾಗಬೇಕು.

ಆರ್ಥಿಕವಾಗಿ ದುರ್ಬಲರಾಗಿರುವ ಜನರ ಕೊಂಡುಕೊಳ್ಳುವ ಶಕ್ತಿ ಹೆಚ್ಚಬೇಕು. ಅಂತೆಯೇ ಶ್ರೀಮಂತವರ್ಗದವರೂ ಕೂಡ ಬಡವರ ಸಹಾಯಕ್ಕೆ ಮುಂದಾಗಬೇಕು, ಈ ಮೂಲಕ ಸಮಾಜದ ಋಣ ತೀರಿಸಲು ಪ್ರಯತ್ನಿಸಬೇಕು. ಡಾ. ಅಂಬೇಡ್ಕರ್ ಅವರು ನೀಡಿರುವ ಸಂವಿಧಾನ ಎಲ್ಲರಿಗೂ ಸಮಾನ ಹಕ್ಕು ಹಾಗೂ ಸಮಾನ ಅವಕಾಶಗಳನ್ನು ನೀಡಿದೆ. ಸಂವಿಧಾನದ ಆಶಯಗಳನ್ನು ಪ್ರತಿಯೊಬ್ಬರೂ ಅರಿತಿರಬೇಕು. ಸಂವಿಧಾನ ನೀಡಿರುವ ಹಕ್ಕು ಬಾಧ್ಯತೆಗಳ ಬಗ್ಗೆ ಅರಿವು ಪಡೆದು, ಜವಾಬ್ದಾರಿಯುತ ನಾಗರಿಕನಾಗುವುದು ಅವಶ್ಯವಾಗಿದೆ ತಿಳಿಸಿದರು.

ವಿವಿಧ ಜಾತಿಯ ವಧು – ವರರು ಈ ಮದುವೆ ಕಾರ್ಯಕ್ರಮ ದಲ್ಲಿ ಹೊಸ ಜೀವನಕ್ಕೆ ಕಾಲಿಟ್ಟಿರುವ.

ಈ ಮದುವೆ ಕಾರ್ಯಕ್ರಮ ದಲ್ಲಿ ವಿಶೇಷ ವಾಗಿ ವಿಕಲಚೇತನ ಮುಸ್ಲಿಂ ವಧುವಿನ ಮದುವೆ ಆಗಿದ್ದು ವಿಶೇಷ. ನವ ದಂಪತಿಗಳಿಗೆ ಮಾಜಿ ಶಾಸಕರಾದ ಸಿರಾಜ್ ಶೇಕ್ ಕಾಂಗ್ರೆಸ್ ಜಿಲ್ಲಾಧ್ಯಕ್ಷರು ಪ್ರತಿ ದಂಪತಿಗಳಿಗೆ ಗೃಹ ಉಪಯೋಗಿ ವಸ್ತುಗಳನ್ನು ಉಚಿತ ವಾಗಿ ನೀಡಿದರು.

ಈ ಸಂದರ್ಭದಲ್ಲಿ ಶಾಸಕರಾದ ಜಿಲ್ಲಾ ಉಸ್ತುವಾರಿ ಸಚಿವರು ಜಮೀರ್ ಅಹಮದ್ ಖಾನ್ ಶಾಸಕರಾದ ಶ್ರೀ ನಿವಾಸ್ ಎನ್ ಟಿ.ಲತಾ ಮಲ್ಲಿಕಾರ್ಜುನ. ಹೆಚ್ ಆರ್ ಗವಿಯಪ್ಪ. ಮತ್ತು ಸಂಸದರಾದ ಈ ತುಕಾರಾಮ್. ಮಾಜಿ ಸಚಿವರು ಪಿ ಟಿ ಪರಮೇಶ್ವರ್ ನಾಯ್ಕ್. ವಿಜಯನಗರ ಜಿಲ್ಲೆಯ ಜಿಲ್ಲಾಧಿಕಾರಿಗಳು. ಮತ್ತು ಸಿಬ್ಬಂದಿ ವರ್ಗದವರು ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *