ಡಿ.ದೇವರಾಜ್ ಅರಸ್ ಟ್ರಕ್ ಟರ್ಮಿನಲ್ಸ್ಥಳ ವೀಕ್ಷಣೆ ನಡೆಸಿದ ಸಾರಿಗೆ ಸಚಿವರು: ಪರಿಶೀಲನೆ

Loading

ಹೊಸಪೇಟೆ (ವಿಜಯನಗರ) : ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಅವರು ಜುಲೈ 10ರಂದು ವಿಜಯನಗರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ಹೊಸಪೇಟೆ ನಗರದ ಹೊರವಲದ ಟಿ.ಬಿ.ಡ್ಯಾಮ್ ಹತ್ತಿರದಲ್ಲಿ ಹೊಸದಾಗಿ ನಿರ್ಮಿಸುತ್ತಿರುವ ಡಿ.ದೇವರಾಜ್ ಅರಸ್ ಟ್ರಕ್ ಟರ್ಮಿನಲ್ ಸ್ಥಳಕ್ಕೆ ಭೇಟಿ ನೀಡಿದರು.

ಪೂರ್ವ ನಿಗದಿಯಂತೆ ಬೆಳಗ್ಗೆ ಪಕ್ಕದ ಬಳ್ಳಾರಿ ಜಿಲ್ಲೆಗೆ ಭೇಟಿ ನೀಡಿ ಕಾರ್ಯಕ್ರಮದಲ್ಲಿ ಭಾಗಿಯಾದ ಬಳಿಕ ಮಧ್ಯಾಹ್ನ ವೇಳೆಗೆ ಹೊಸಪೇಟೆ ನಗರದತ್ತ ಆಗಮಿಸಿದ ಸಚಿವರು, ಶಾಸಕರಾದ ಹೆಚ್.ಆರ್.ಗವಿಯಪ್ಪ ಅವರೊಂದಿಗೆ ಟ್ರಕ್ ಟರ್ಮಿನಲ್‌ಗೆ ಭೇಟಿ ನೀಡಿ, ಟ್ರಕ್ ಟರ್ಮಿನಲ್‌ನ ಕಟ್ಟಡ ಕಾಮಗಾರಿಯ ಸ್ಥಿತಿಗತಿಯನ್ನು ಖುದ್ದು ಪರಿಶೀಲಿಸಿದರು.

ರಾಜ್ಯದಲ್ಲಿನ ಟ್ರಕ್ ಡ್ರೆöÊವರ್‌ಗಳ ಪರಿಸ್ಥಿತಿಯನ್ನು ಅರ್ಥೈಸಿಕೊಂಡು ರಾಜ್ಯದ ಅಲ್ಲಲ್ಲಿ ಟ್ರಕ್ ಟರ್ಮಿನಲ್ ನಿರ್ಮಾಣಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. ಸುರಕ್ಷತೆಯ ದೃಷ್ಟಿಯಿಂದಾಗಿ ಟ್ರಕ್ ಟರ್ಮಿನಲ್ ನಿರ್ಮಾಣದಿಂದಾಗಿ ವಾಹನ ಚಾಲಕರಿಗೆ ಅನುಕೂಲವಾಗಲಿದೆ ಎಂದು ಅವರು ತಿಳಿಸಿದರು.

ದೇವರಾಜ್ ಅರಸ್ ಟ್ರಕ್ ಟರ್ಮಿನಲ್‌ಗೆ ಅಗತ್ಯ ಪ್ರಮಾಣದಲ್ಲಿ ಅನುದಾನ ನಿಗದಿಪಡಿಸಿ ನಿರ್ಮಿಸಲಾಗುತ್ತಿದೆ. ಈ ಟರ್ಮಿನಲ್‌ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಟ್ರಕ್‌ಗಳ ನಿಲುಗಡೆಗೆ ವ್ಯವಸ್ಥೆ ಮಾಡಲಾಗುತ್ತಿದೆ. ಎರಡು ಕಡೆಗಳಲ್ಲಿ ಶೌಚಾಲಯದ ವ್ಯವಸ್ಥೆ ಮತ್ತು 10 ಗ್ಯಾರೇಜ್‌ಗಳು ಇರಲಿವೆ. ಟ್ರಕ್ ಡ್ರೆöÊವರ್ ಮತ್ತು ಕ್ಲೀನರ್‌ಗಳಿಗೆ ತಂಗುದಾಣದಲ್ಲಿ ಬೆಡ್‌ಗಳು ಮತ್ತು ಊಟದ ವ್ಯವಸ್ಥೆ ಸೇರಿ ಮುಂತಾದ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ ಎಂದು ಅವರು ತಿಳಿಸಿದರು.

ಸಸಿ ನೆಟ್ಟರು: ಟ್ರಕ್ ಟರ್ಮಿನಲ್ ನಿರ್ಮಾಣ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ ವೇಳೆ ಸಚಿವರು, ಎಲ್ ಅಂಡ್ ಟಿ ಕಂಪನಿಯಿAದ ಸಸಿಗಳನ್ನು ನೆಟ್ಟು ಟರ್ಮಿನಲ್‌ನಲ್ಲಿ ಸುಮಾರು 1500 ಗಿಡಗಳನ್ನು ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಎಂ.ಎಸ್.ದಿವಾಕರ, ಸಾರಿಗೆ ಇಲಾಖೆಯ ವ್ಯವಸ್ಥಾಪಕ ನಿರ್ದೇಶಕರಾದ ಶಿವಪ್ರಕಾಶ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್.ಎನ್. ಮೊಹಮ್ಮದ್ ಇಮಾಮ್ ನಿಯಾಜಿ, ತಹಸೀಲ್ದಾರ್ ವಿಶ್ವಜೀತ್ ಮೆಹತಾ, ಸಾರಿಗೆ ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿ, ಟರ್ಮಿನಲ್‌ನ ಅಧಿಕಾರಿ ಮತ್ತು ಸಿಬ್ಬಂದಿ, ಎಲ್ ಅಂಡ್ ಟಿ ಕಂಪನಿಯ ಅಧಿಕಾರಿಗಳು, ಟ್ರಕ್ ಯೂನಿಯನ್ ಸಂಘದ ಪ್ರಮುಖರು ಮತ್ತು ಇನ್ನೀತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *