
ಹೊಸಪೇಟೆ (ವಿಜಯನಗರ) : ವಸತಿ, ವಕ್ಫ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಜೆಡ್.ಜಮೀರ್ ಅಹ್ಮದ್ಖಾನ್ ಅವರು ಆಗಸ್ಟ್ 14ರಂದು ವಿವಿಧ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಆಗಸ್ಟ್ 14 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 2 ಗಂಟೆವರೆಗೆ ಹೊಸಪೇಟೆಯ ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ಜನತಾ ದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಬಳಿಕ ಮಧ್ಯಾಹ್ನ 2:30 ರಿಂದ ಸಂಜೆ 5 ಗಂಟೆವರೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಯುವ ಮೊದಲನೇಯ ತ್ರೆöÊಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸುವರು. ನಂತರ ಸಂಜೆ 5 ರಿಂದ 6 ಗಂಟೆಯವರೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಯುವ ಜಿಲ್ಲೆಯ ಅತಿವೃಷ್ಟಿ/ ಅನಾವೃಷ್ಟಿಯ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಟಿ.ಬಿ.ಡ್ಯಾಮ್ನ ವೈಕುಂಠ ಅತಿಥಿ ಗೃಹದಲ್ಲಿ ವಾಸ್ತವ್ಯ ಮಾಡುವರು.
ಸಚಿವರಿಂದ ಧ್ವಜಾರೋಹಣ: ಆಗಸ್ಟ್ 15 ರಂದು ಬೆಳಿಗ್ಗೆ 9 ಗಂಟೆಗೆ ಹೊಸಪೇಟೆ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ ಸ್ವಾತಂತ್ರö್ಯ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಂತರ ಬೆಳಿಗ್ಗೆ 10 ಗಂಟೆಗೆ ಹೊಸಪೇಟೆ ತಾಲೂಕಿನ ಕೊಂಡನಾಯಕನಹಳ್ಳಿಯಲ್ಲಿ ಪಕ್ಷದಿಂದ ನಡೆಯುವ ಸ್ವಾತಂತ್ರö್ಯ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಬಳಿಕ ಟಿ.ಬಿ.ಡ್ಯಾಮ್ನ ವೈಕುಂಠ ಅತಿಥಿ ಗೃಹದಲ್ಲಿ ವಾಸ್ತವ್ಯ ಮಾಡುವರು.
ಆಗಸ್ಟ್ 16 ರಂದು ಬೆಳಿಗ್ಗೆ 9.30ಕ್ಕೆ ವಿಜಯನಗರದಿಂದ ನಿರ್ಗಮಿಸಿ ಬಳ್ಳಾರಿ ಜಿಲ್ಲೆಗೆ ಪ್ರಯಾಣ ಬೆಳೆಸುವರು ಎಂದು ಸಚಿವರು ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.