ವಿಜಯ ನಗರ ಜಿಲ್ಲಾಧಿಕಾರಿಗಳ ನಿರ್ದೇಶನದ ಮೇರೆಗೆ  ಪಿ.ಓ.ಪಿ ಗಣೇಶನ ವಿಗ್ರಹಗಳ ಪರಿಶೀಲನೆ ಮಾಡಿದ ಅಧಿಕಾರಿಗಳು

Loading

ಹೊಸಪೇಟೆ :  ನಗರದ ಜಂಬುನಾಥ ರಸ್ತೆಯಲ್ಲಿ ಗಣೇಶನ ವಿಗ್ರಹಗಳ ಮಾರಾಟಗಾರರ ಅಂಗಡಿಗಳ ಮೇಲೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳು ಹಾಗೂ ನಗರಸಭೆಯ ಸಿಬ್ಬಂದಿಗಳೊಂದಿಗೆ ಜಂಟಿಯಾಗಿ ದಾಳಿ ಮಾಡಿ ಪಿ.ಓ.ಪಿ ಗಣೇಶನ ವಿಗ್ರಹಗಳನ್ನು ವಶಪಡಿಸಿಕೊಂಡಿರುತ್ತಾರೆಕೊರೆ.

ಹಾಗೂ ಜಿಲ್ಲೆಯಲ್ಲಿ ಎಲ್ಲಾದರೂ ಪಿ.ಓ.ಪಿ ಗಣೇಶನ ವಿಗ್ರಹಗಳ ತಯಾರಿಕೆ, ಮಾರಾಟ ಹಾಗೂ ಸಂಗ್ರಹಣೆ ಮಾಡುತ್ತಿರುವುದು ಕಂಡು ಬಂದಲ್ಲಿ ಅವುಗಳನ್ನು ನಿಯಮಾನುಸಾರ ವಶಪಡಿಸಿಕೊಂಡು ಸದರಿಯವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದೆಂದು ಮಾನ್ಯ ಜಿಲ್ಲಾಧಿಕಾರಿಗಳು ಸೂಚಿಸಿದರು.

Leave a Reply

Your email address will not be published. Required fields are marked *