ಹೊಸಪೇಟೆ (ವಿಜಯನಗರ) ಸೆಪ್ಟೆಂಬರ್ 11, : ಹೊಸಪೇಟೆ ರೈಲ್ವೆ ಇಲಾಖೆಯಲ್ಲಿ ಸೀನಿಯರ್ ಗೂಡ್ಸ್ ಟ್ರೈನ್ ಮ್ಯಾನೇಜರ್ ಕೆಲಸ ಮಾಡುತ್ತಿದ್ದ ಕುನಪರೆಡ್ಡಿ ವೆಂಕಟ ಸೂರ್ಯನಾರಾಯಣ (36) ಅವರು ಕಾಣೆಯಾದ ಬಗ್ಗೆ ಹೊಸಪೇಟೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಗುನ್ನೆ.ನಂ: 191/2024ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಕಾಣೆಯಾದ ವ್ಯಕ್ತಿಯು ಪ್ರತಿದಿನ ಸರದಿಯಂತೆ ಡ್ಯೂಟಿಗೆ ಹೋಗಿ ಬರುತ್ತಿದ್ದು, ಸೆಪ್ಟೆಂಬರ್ 05 ರಂದು ಮಧ್ಯಾಹ್ನ 12.45ಕ್ಕೆ ಹೊಸಪೇಟೆಯ ಅಮರಾವತಿಯಲ್ಲಿ ವಾಸವಿರುವ ತಮ್ಮ ಮನೆಯಿಂದ ಡ್ಯೂಟಿಗೆ ಹೋಗುವುದಾಗಿ ಹೇಳಿ ಹೋಗಿ, ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಇಲ್ಲಿಯವರೆಗೂ ಮನೆಗೆ ಬಂದಿರುವುದಿಲ್ಲ. ಸ್ನೇಹಿತರು ಮತ್ತು ತಮ್ಮ ಸಂಬAಧಿಕರನ್ನು ವಿಚಾರಿಸಿದಾಗ ಎಲ್ಲಿಯೂ ಕಂಡು ಬಂದಿರುವುದಿಲ್ಲ ಎಂದು ಕಾಣೆಯಾದ ವ್ಯಕ್ತಿಯ ಬಗ್ಗೆ ಹೊಸಪೇಟೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಚಹರೆ: 36 ವರ್ಷ, 5.9 ಅಡಿ ಎತ್ತರ, ಗೋಧಿ ಮೈಬಣ್ಣ, ಸಾಧಾರಣಾ ಮೈಕಟ್ಟು, ದುಂಡು ಮುಖ, ಎಡಕುತ್ತಿಗೆಯ ಮೇಲೆ ಅರ್ಧ ಇಂಚು ಕಪ್ಪು ಮಚ್ಚೆ ಇರುತ್ತದೆ. ಮನೆಯಿಂದ ಹೊರಟಾಗ ಬಿಳಿ ಬಣ್ಣದ ತುಂಬುತೋಳಿನ ಅಂಗಿ, ಬ್ರೌನ್ ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ. ತೆಲುಗು, ಇಂಗ್ಲೀಷ್, ಹಿಂದಿ ಮತ್ತು ಕನ್ನಡ ಭಾಷೆ ಮಾತನಾಡುತ್ತಾನೆ.
ಈ ಕಾಣೆಯಾದ ವ್ಯಕ್ತಿಯು ಕಂಡುಬAದಲ್ಲಿ ಅಥವಾ ಮಾಹಿತಿ ತಿಳಿದು ಬಂದಲ್ಲಿ ಹೊಸಪೇಟೆ ಕಂಟ್ರೋಲ್ ರೂಂ ನಂ: 9480807700, ಗ್ರಾಮೀಣ ಪೊಲೀಸ್ ಠಾಣೆಯ ಪೋನ್ ನಂ: 228233-08394, ಗ್ರಾಮೀಣ ಪೊಲೀಸ್ ಠಾಣೆಯ ಪಿ.ಐ ಮೊ.ನಂ: 9480805746 ಗೆ ಸಂಪರ್ಕಿಸಬಹುದು ಎಂದು ಹೊಸಪೇಟೆ ಗ್ರಾಮೀಣ ಪೊಲೀಸ್ ಠಾಣೆಯ ಠಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.