
(ವಿಜಯ ನಗರ) ಹೊಸಪೇಟೆ :ವಿಜಯನಗರ ಜಿಲ್ಲೆಯ ಜನರು ಪ್ರಜಾಪ್ರಭುತ್ವ ದಿನವನ್ನು ಮಾನವ ಸರಪಳಿ ಮಾಡುವ ಮೂಲಕ ಐತಿಹಾಸಿಕ ಕಾರ್ಯಕ್ರಮಕ್ಕೆ ಸಾಕ್ಷಿ ಯಾದರು ಈ ಕಾರ್ಯಕ್ರಮ ದಲ್ಲಿ ಜಯಘೋಷ ಹಾಕಿ ಸಂಭ್ರಮಿಸಿದರು. ವಿಜಯನಗರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ವಿಜಯನಗರ ಜಿಲ್ಲೆಯಲ್ಲಿ ಸೆ.15ರಂದು ನಡೆದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಮಾನವ ಸರಪಳಿ ಕಾರ್ಯಕ್ರಮವು ಹೊಸ ಇತಿಹಾಸ ಸೃಷ್ಟಿಸಿತು.
ಪೂರ್ವನಿಗದಿಯಂತೆ ಬೆಳಗಿನ ಅವಧಿಯಲ್ಲಿ ಮಾನವ ಸರಪಳಿ ಕಾರ್ಯವು ಮಾರ್ಗದುದ್ದಕ್ಕೂ ಯಶಸ್ವಿಯಾಗಿ ಮಾನವ ಸರಪಳಿ ಮಾಡಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

ನಗರದ ಹೊರವಲಯದ ಪಿಕೆ ಹಳ್ಳಿಯಲ್ಲಿ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು ಈ ಸಂದರ್ಭದಲ್ಲಿ ಪಿ ಕೆ ಹಳ್ಳಿಯಲ್ಲಿ ಈ ಕಾರ್ಯ ನಿಮಿತ್ತ ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕರಾದ ಶ್ರೀ ಪ್ರಭುಲಿಂಗ ತಳಿಕೇರಿ ಅವರು ಉಪಸ್ಥಿತರಿದ್ದು ತಮ್ಮ ಇಲಾಖೆಯ ಸಿಬ್ಬಂದಿಯೊಡನೆ ಮಾನವ ಸರಪಳಿಯ ವ್ಯವಸ್ಥಿತವಾಗಿ ನೋಡಿಕೊಂಡರು. ಪೊಲೀಸರು ಹಾಗೂ ಊರಿನ ಮುಖಂಡರು ಯುವಕರು ಈ ಕಾರ್ಯಕ್ರಮದಲ್ಲಿ ಕೈಜೋಡಿಸಿದರು.
