
ಬೆಂಗಳೂರು : ಅಖಿಲ ಭಾರತ ವೀರಶೈವ ಮಹಾಸಭಾ, ಬೆಂಗಳೂರು. ಇದರ ಮೂರನೇ ಹಂತದ ಚುನಾವಣೆಯ ಸಂಬಂಧವಾಗಿ ಅಖಿಲ ಭಾರತ ವೀರಶೈವ ಮಹಾಸಭಾ ಇದರ ಅಧ್ಯಕ್ಷ ಸ್ಥಾನಕ್ಕಾಗಿ ಚುನಾವಣಾ ವೇಳಾಪಟ್ಟಿಯಂತೆ ದಿನಾಂಕ: 05-09-2024 ರಿಂದ ದಿನಾಂಕ: 11-09-2024ರವರೆಗೆ ನಾಮಪತ್ರಗಳನ್ನು ಸಲ್ಲಿಸಲು ಅವಕಾಶವಿತ್ತು. ಈ ಅವಧಿಯಲ್ಲಿ ಮಹಾಸಭೆಯ ಹಾಲಿ ಅಧ್ಯಕ್ಷರು ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಡಾ. ಶಾಮನೂರು ಶಿವಶಂಕರಪ್ಪನವರು ಮಾತ್ರ ನಾಮಪತ್ರವನ್ನು ಸಲ್ಲಿಸಿದ್ದರಿಂದ ಡಾ. ಶಾಮನೂರು ಶಿವಶಂಕರಪ್ಪನವರು ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾಗಿರುತ್ತಾರೆಂದು ಚುನಾವಣಾಧಿಕಾರಿಗಳಾದ ಶ್ರೀ ಎಂ.ಬಿ.ದ್ಯಾಬೇರಿ, ಐ.ಎ.ಎಸ್(ನಿ.) ಇವರು ಇಂದು ಅಂದರೆ ದಿನಾಂಕ: 15-09-2024ರಂದು ಪ್ರಕಟಿಸಿ, ಘೋಷಿಸಿರುತ್ತಾರೆ. ಎಂದು ಸಿ.ಎಸ್.ವೀರೇಶ್, ಕೆ.ಸಿ.ಎಸ್. ನಿವೃತ್ತ ಸಹಕಾರ ಸಂಘಗಳ ಅಪರ ನಿಬಂಧಕರು, ಕರ್ನಾಟಕ ರಾಜ್ಯ ಘಟಕದ ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.