ವಾರ್ತಾಲಾಪ ವಿಶೇಷ ಕಾರ್ಯಾಗಾರ ಸೆ.24ಕ್ಕೆ
ಹೊಸಪೇಟೆ (ವಿಜಯನಗರ) : ಭಾರತ ಸರ್ಕಾರದ ವಾರ್ತಾ ಶಾಖೆ ಬೆಂಗಳೂರು, ಪ್ರೆಸ್ ಇನ್ಫಾರ್ಮೇಶನ್ ಬ್ಯುರೋ ಬೆಂಗಳೂರು, ವಿಜಯನಗರ ಜಿಲ್ಲಾಡಳಿತ, ತಾಲೂಕಾಡಳಿತ, ಜಿಲ್ಲಾ ಮತ್ತು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಪ್ರೆಸ್ಕ್ಲಬ್ ಹೂವಿನಹಡಗಲಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಹೂವಿನಹಡಗಲಿ ಮತ್ತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಶ್ರೀಮತಿ ರುದ್ರಾಂಭ ಎಂ.ಪಿ.ಪ್ರಕಾಶ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ಸೆಪ್ಟಂಬರ್ 24ರಂದು ಮಧ್ಯಾಹ್ನ 12.30ಕ್ಕೆ ಹೂವಿನಹಡಗಲಿಯ ಶ್ರೀಮತಿ ರುದ್ರಾಂಭ ಎಂ.ಪಿ.ಪ್ರಕಾಶ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ವಿಜಯನಗರ ಮತ್ತು ಹೂವಿನಹಡಗಲಿ ಜಿಲ್ಲಾ ಮತ್ತು ತಾಲೂಕು ಮಾಧ್ಯಮ ಪ್ರತಿನಿಧಿಗಳಿಗೆ ವಿಶೇಷ ಕಾರ್ಯಗಾರ ವಾರ್ತಾಲಾಪ ಕಾರ್ಯಕ್ರಮ ಆಯೋಜಿಸಲಾಗಿದೆ.
ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವರು ಹಾಗೂ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಜೆಡ್.ಜಮೀರ್ ಅಹ್ಮದ್ಖಾನ್ ಅವರು ಗೌರವ ಉಪಸ್ಥಿತಿ ವಹಿಸುವರು. ಬಳ್ಳಾರಿ ಲೋಕಸಭಾ ಸದಸ್ಯರಾದ ಈ. ತುಕಾರಾಂ ಅವರು ಕಾರ್ಯಕ್ರಮ ಉದ್ಘಾಟಿಸುವರು. ಹೂವಿನಹಡಗಲಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೃಷ್ಣ ನಾಯಕ ಅವರು ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯರುಗಳಾದ ಡಾ. ಚಂದ್ರಶೇಖರ ಬಿ ಪಾಟೀಲ್, ಶಶೀಲ್ ಜಿ ನಮೋಶಿ, ವೈ.ಎಂ. ಸತೀಶ್ ಹಾಗೂ ಭಾರತ ಸರ್ಕಾರದ ವಾರ್ತಾ ಶಾಖೆ (ಪಿ.ಐ.ಬಿ) ಕೇಂದ್ರ ಸಂವಹನ ಇಲಾಖೆಯ ಕರ್ನಾಟಕ ವಲಯದ ಹೆಚ್ಚುವರಿ ಮಹಾನಿರ್ದೇಶಕರಾದ ಎಸ್.ಜಿ. ರವೀಂದ್ರ, ವಿಜಯನಗರ ಜಿಲ್ಲೆಯ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಅಧ್ಯಕ್ಷರಾದ ಪಿ.ಸತ್ಯನಾರಾಯಣ, ಹೂವಿನಹಡಗಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಚಂದ್ರು ಕೊಂಚಿಗೇರಿ, ಹೂವಿನಹಡಗಲಿ ಕರ್ನಾಟಕ ಪ್ರೆಸ್ ಕ್ಲಬ್ನ ಅಧ್ಯಕ್ಷರಾದ ಹೆಚ್.ಸುಭಾಸಚಂದ್ರ, ಹೂವಿನಹಡಗಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಅಧ್ಯಕ್ಷರಾದ ಪರುಶುರಾಮ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಗವಿಸಿದ್ದಪ್ಪ ಹೊಸಮನಿ ಮತ್ತು ಶ್ರೀಮತಿ ರುದ್ರಾಂಭ ಎಂ.ಪಿ.ಪ್ರಕಾಶ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ವಿಜಯ ಕುಮಾರ್ ಹೇಮಪ್ಪ ಇವರು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು.
ಕಾರ್ಯಗಾರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಶ್ವೇತಾ.ಎಸ್ ಅವರು ಪೋಷಣಾ ಅಭಿಯಾನದ ಕುರಿತು, ಹಗರಿಬೊಮ್ಮನಹಳ್ಳಿ ತಾಲೂಕು ಆಸ್ಪತ್ರೆಯ ಮಕ್ಕಳ ತಜ್ಞರಾದ ಡಾ.ತಿಪ್ಪೇಸ್ವಾಮಿ ಅವರು ಪೋಷಣಾ ಅಭಿಯಾನ ಮತ್ತು ಮಕ್ಕಳ ಆರೈಕೆ ಕುರಿತು, ಹೂವಿನಹಡಗಲಿಯ ಕೌಶಲ್ಯ ಅಭಿವೃದ್ಧಿ ಅಧಿಕಾರಿ ಲಕ್ಷಿö್ಮ ಅವರು ರಾಷ್ಟಿçÃಯ ನಗರ ಜೀವನೋಪಾಯ ಮಿಷನ್ ಕುರಿತು, ಹೂವಿನಹಡಗಲಿ ಎಸ್ಬಿಐನ ವ್ಯವಸ್ಥಾಪಕರಾದ ಯಶವಂತ್ಕುಮಾರ್ ನಾಯ್ಕ್ ಎಲ್.ಜಿ ಅವರು ಪ್ರಧಾಮಮಂತ್ರಿ ಶ್ರಮ ಯೋಗಿ ಮಾನ್ ಧನ್ ಯೋಜನೆ, ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ, ಪ್ರಧಾನಮಂತ್ರಿ ಮುದ್ರಾ ಯೋಜನೆ ಮತ್ತು ಪ್ರಧಾನಮಂತ್ರಿ ಸ್ವ-ನಿಧಿಯ ಯೋಜನೆಯ ಬಗ್ಗೆ ತಿಳಿಸುವರು ಎಂದು ಭಾರತ ಸರ್ಕಾರದ ವಾರ್ತಾ ಶಾಖೆಯ ಪ್ರಕಟಣೆ ತಿಳಿಸಿದೆ.