
ಕೊಟ್ಟೂರು: ಕೊಟ್ಟೂರು ತಾಲೂಕು ಸರಕಾರಿ ನೌಕರರ ಸಂಘದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಡಿ 2 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಶ್ರೀಮತಿ ಪುಷ್ಪಲತಾ ಅವರು ಅವಿರೋಧವಾಗಿ ಆಯ್ಕೆಯಾದರು ಹಾಗೂ ಹ್ಯಾಳ್ಯಾ ಪಿಡಿಒ ಸಿ ಎಚ್ ಎಂ ಗಂಗಾಧರ ಅವರು 18 ಮತಗಳಿಂದ ಜಯಗಳಿಸಿದರು.
ಆಯ್ಕೆಯಾದ ಶ್ರೀಮತಿ ಪುಷ್ಪಲತಾ ಹಾಗೂ ಪಿಡಿಒ ಸಿ ಎಚ್ ಎಂ ಗಂಗಾಧರ ಅವರು ಆಯ್ಕೆಯಾದ ಹಿನ್ನೆಲೆಯಲ್ಲಿ ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ಆನಂದ,ಹೆಚ್ ವಿಜಯ್ ಕುಮಾರ್, ಮತ್ತು ಆರ್ ಡಿಪಿಆರ್ ಇಲಾಖೆಯ ಎಲ್ಲ ಸಿಬ್ಬಂದಿಗಳು ಶುಭಕೋರಿದ್ದಾರೆ.