ವಿಜಯನಗರ : ರಾಷ್ಟ್ರೀಯ ಯುವಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಬಿ.ವಿ.ಶ್ರೀನಿವಾಸ್ ಕರ್ನಾಟಕ ಪ್ರದೇಶ ಯುವಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಶ್ರೀ.ಮಹಮ್ಮದ್ ನಲಪಾಡ್ ಹ್ಯಾರಿಸ್ ಮತ್ತು ರಾಜ್ಯ ಉಪಾಧ್ಯಕ್ಷರಾದ ಸಿರಿಲ್ ಪ್ರಭು, ಬಳ್ಳಾರಿ ಗ್ರಾಮೀಣ ಹಾಗೂ ವಿಜಯನಗರ ಜಿಲ್ಲಾ ಅಧ್ಯಕ್ಷರಾದ ಶ್ರೀ ಸಿದ್ದು ಹಳ್ಳೇಗೌಡ ಇವರ ಆದೇಶದ ಮೇರೆಗೆ ವಿಜಯನಗರ ಜಿಲ್ಲಾ ಹೊಸಪೇಟೆ ಬ್ಲಾಕ್ ಯುವಕಾಂಗ್ರೆಸ್ ಸಮಿತಿಯ ಬ್ಲಾಕ್ ಅಧ್ಯಕ್ಷರನ್ನಾಗಿ ಶ್ರೀ ಪ್ರದೀಪ್ ಭಾವಿಕಟ್ಟಿ ಇವರನ್ನು ತಕ್ಷಣವೇ ಜಾರಿಗೆ ಬರುವಂತೆ ನೇಮಕಾತಿ ಮಾಡಲಾಗಿದೆ ಎಂದು ತಿಳಿಸಲಾಗಿದೆ.
ತಮಗೆ ವಹಿಸಿರುವ ಹೊಣೆಗಾರಿಕೆಯನ್ನು ನಿಷ್ಠೆಯಿಂದ ನಿರ್ವಹಿಸುತ್ತಾ, ಜಿಲ್ಲಾ ಮತ್ತು ತಾಲ್ಲೂಕು ಯುವಕಾಂಗ್ರೆಸ್ ಸಮಿತಿ ಮಾರ್ಗದರ್ಶನದಂತೆ ತಮ್ಮ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಸ್ಥಳೀಯ ನಾಯಕರ ಸಹಕಾರದೊಂದಿಗೆ ತಮಗೆ ನೀಡಿರುವ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸಲು ಸೂಚಿಸಲಾಗಿದೆ,