
ಕೊಟ್ಟೂರು:- ಅದಾನಿ ಮೇಲಿನ ಲಂಚ ಪ್ರಕರಣದ ಕುರಿತು ಜೆಪಿಸಿ ಮೂಲಕ ತನಿಖೆ ನಡೆಸಲು ಒತ್ತಾಯಿಸಿ, ಮಣಿಪುರದಲ್ಲಿ ಶಾಂತಿ ಸ್ಥಾಪನೆಗೆ ಆಗ್ರಹಿಸಿ, ಕೋಮು ಭಾವನೆ ಕೆರಳಿಸಿ ಹಿಂಸಾಚಾರಕ್ಕೆ ಪ್ರಚೋದಿಸುತ್ತಿರುವುದನ್ನು ತಡೆಗಟ್ಟಲು ಒತ್ತಾಯಿಸಿ, ಬೆಲೆ ಏರಿಕೆ ನಿರುದ್ಯೋಗ ಸಮಸ್ಯೆ ಪರಿಹರಿಸುವಲ್ಲಿ ವಿಫಲವಾಗಿರುವ ಕೇಂದ್ರ ಸರ್ಕಾರದ ಜನ ವಿರೋಧಿ ಆಡಳಿತವನ್ನು ಖಂಡಿಸಿ ವಿಶ್ವ ಮಾನವ ಹಕ್ಕುಗಳ ದಿನವಾದ ಡಿಸೆಂಬರ್ 10 ರಂದು ಕೊಟ್ಟೂರು ತಹಶಿಲ್ದಾರ ಅಮರೇಶ್ ಜಿಕೆ ಅವರ ಮುಖಾಂತರ ಕಾರ್ಯಕರ್ತರ ಸಮ್ಮುಖದಲ್ಲಿ ಕೊಟ್ಟೂರು ತಾಲೂಕು ಸಹ ಕಾರ್ಯದರ್ಶಿ ಕೆ.ಕೊಟ್ರೇಶ ಮನವಿಯನ್ನು ಸಲ್ಲಿಸಿದರು.
ಆಡಳಿತ ನಡೆಸಲು ಬೇಕಾದ ಸರಳ ಬಹುಮತಗಳನ್ನು ಪಡೆಯಲಾಗದ ಬಿಜೆಪಿ ಇತರೆ ಪ್ರಾದೇಶಿಕ ಪಕ್ಷಗಳ ಬೆಂಬಲದೊಂದಿಗೆ ಮೂರನೇ ಬಾರಿಗೆ ಅಧಿಕಾರದಲ್ಲಿ ಮುಂದುವರಿದಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಜಾತಂತ್ರ ವಿರೋಧಿ ಆಡಳಿತವನ್ನು ಮುಂದುವರಿಸಿದೆ. ದೇಶದಲ್ಲಿ ರೈತ ಕಾರ್ಮಿಕರ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮುಖ್ಯತೆ ನೀಡದೆ ಆದಾನಿ ಅಂಬಾನಿಯಂತಹ ಬಂಡವಾಳಶಾಹಿಗಳ ಹಿತಾಸಕ್ತಿಗಾಗಿಯೇ ಅಧಿಕಾರ ಬಳಕೆಯಾಗುತ್ತಿದೆ.
ನರೇಂದ್ರ ಮೋದಿ ಅವರ ಆಡಳಿತದಲ್ಲಿ ದೇಶ ಆರ್ಥಿಕ ಮುಗ್ಗಟ್ಟನ್ನು ಎದುರಿಸುತ್ತಿದ್ದು ದೇಶದ ಜಿಡಿಪಿ ನಿರಂತರವಾಗಿ ಕುಸಿಯುತ್ತಿದೆ. ನಿರುದ್ಯೋಗಿಗಳ ಸಂಖ್ಯೆಯು ದಿನೇ ದಿನೇ ಹೆಚ್ಚುತ್ತಿದ್ದು ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಜನಸಾಮಾನ್ಯರು ಸಂಕಳ್ಳದಲ್ಲಿಯೇ ಬದುಕು ನಡೆಸುವಂತಾಗಿದೆ. ಸಂವಿಧಾನದ ಬಹುತ್ವದ ಆಶಯಗಳಿಗೆ ವಿರುದ್ಧವಾಗಿ ಏಕತ್ವದ ಪ್ರತಿಪಾದನೆ ಮುಂದುವರಿಸಿರುವ ಮೋದಿ ಸರ್ಕಾರ ಒಕ್ಕೂಟ ವ್ಯವಸ್ಥೆಗೆ ಮಾರಕವಾಗಲಿರುವ ‘ಒಂದು ದೇಶ ಒಂದು ಚುನಾವಣೆ’ ಎಂಬ ವಿಳಯವನ್ನು ಪದೇ ಪದೇ ಮುನ್ನೆಲೆಗೆ ತರುತ್ತಿದೆ. ಮಣಿಪುರ, ಉತ್ತರ ಪ್ರದೇಶಗಳು ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಜಾತಿ ಜನಾಂಗೀಯ ಸಂಘರ್ಳಗಳು, ಕೋಮು ಭಾವನೆ ಕೆರಳಿಸಿ ಹಿಂಸಾಚಾರಗಳು ಭುಗಿಲೇಳುತ್ತಿದ್ದರೂ ಶಾಂತಿ ಸೌಹಾರ್ದತೆ ಬಲಪಡಿಸುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ಈ ಹಿನ್ನೆಲೆಯಲ್ಲಿ ವಿಶ್ವಮಾನವ ಹಕ್ಕುಗಳ ದಿನವಾದ ಇಂದು ಭಾರತ ಕಮ್ಯುನಿಸ್ಟ್ ಪಕ್ಷ (ಸಿಪಿಐ) ದೇಶಾದ್ಯಂತ ಪ್ರತಿಭಟನಾ ದಿನವಾಗಿ ಆಚರಿಸಲು ಕರೆ ನೀಡಿದ್ದು ಈ ಕೆಳಗಿನ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸುತ್ತದೆ.
ಎಂದು ಭಾರತ ಕಮ್ಯುನಿಸ್ಟ್ ಪಕ್ಷದ ತಾಲೂಕು ಸಹ ಕಾರ್ಯದರ್ಶಿ ಕೆ ಕೊಟ್ರೇಶ್,ಪಿ ಚಂದ್ರಶೇಖರ್,ಅಂಜನಿ ಎಲ್, ಮಂಜುನಾಥ್ ಭಜಂತ್ರಿ,ಚೆನ್ನ್, ಪ್ರಕಾಶ್, ಇತರರು ಇದ್ದರು