ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ತಾತ್ಕಾಲಿಕ ಕಚೇರಿ ಕಾರ್ಯಾರಂಭ

Loading

ಹೊಸಪೇಟೆ (ವಿಜಯನಗರ),ಜು.24: ಜಿಲ್ಲಾ ಮಟ್ಟದ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಕಚೇರಿಯು ತಾತ್ಕಾಲಿಕವಾಗಿ ಜಿಲ್ಲಾ ಕೇಂದ್ರದಲ್ಲಿ ಕಾರ್ಯನಿರ್ವಹಿಸಲಿದೆ ಎಂದು ವ್ಯವಸ್ಥಾಪಕ ಮಲ್ಲಿಕಾರ್ಜುನ ಅವರು ತಿಳಿಸಿದ್ದಾರೆ.
ಜಿಲ್ಲಾ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ತಾತ್ಕಾಲಿಕ ಕಚೇರಿಯನ್ನು ಹೊಸಪೇಟೆ ತಾಲ್ಲೂಕು ಕಚೇರಿ ಆವರಣದ ಮೊದಲನೇ ಮಹಡಿಯ ಕೊಠಡಿ ಸಂಖ್ಯೆ 5ರಲ್ಲಿ ಮಂಗಳವಾರ, ಗುರುವಾರ ಮತ್ತು ಶನಿವಾರ ದಿನಗಳಲ್ಲಿ ಕಾರ್ಯನಿರ್ವಹಿಸಲಿದ್ದು, ಸಾರ್ವಜನಿಕರು ನಿಗದಿತ ದಿನಗಳಲ್ಲಿ ಕಚೇರಿಗೆ ಭೇಟಿ ನೀಡಬಹುದು.

Leave a Reply

Your email address will not be published. Required fields are marked *