ಸಾರ್ವಜನಿಕ ಕುಂದು ಕೊರತೆ ನಿವಾರಣಾ ಸಭೆ ಮತ್ತು ಎಲ್ಲಾ ಗ್ರಾ.ಪಂ ಗಳಲ್ಲಿ ಮಾಹಿತಿ ನೀಡಲು ಸೂಚನೆ

Loading

ಕನಕಗಿರಿ: ಪ್ರತಿ ಗ್ರಾಮ ಪಂಚಾಯತಿಗಳಲ್ಲಿ ಸಾರ್ವಜನಿಕ ಕುಂದುಕೊರತೆಯ ಮಾಹಿತಿವುಳ್ಳ ಬ್ಯಾನರ್ ಗಳನ್ನು ಕಡ್ಡಾಯವಾಗಿ ಅಳವಡಿಸಲು ಗ್ರಾ.ಪಂ ಅಭಿವೃದ್ಧಿ ಅಧಿಕಾರಿಗಳಿಗೆ ಸಾರ್ವಜನಿಕ ಕುಂದು ಕೊರತೆ ನಿವಾರಣಾ ಪ್ರಾಧಿಕಾರದ ಡಾ.ಶ್ರೀನಿವಾಸ್ ರೆಡ್ಡಿ ಅವರು ಸೂಚಿಸಿದರು.

ಪಟ್ಟಣದ ತಾಲೂಕು ಪಂಚಾಯತಿಯ ಸಭಾಂಗಣದಲ್ಲಿ ಮಂಗಳವಾರ ನಡೆದ ಸಾರ್ವಜನಿಕ ಕುಂದು ಕೊರತೆಗಳ ನಿವಾರಣಾ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.  ಕಡ್ಡಾಯವಾಗಿ ಎಲ್ಲಾ ಗ್ರಾ.ಪಂ ಗಳಲ್ಲಿ ಬ್ಯಾನರ್ ಗಳನ್ನು ಅಳವಡಿಸಿ, ಎಲ್ಲಾ ಗ್ರಾಮಸಭೆ & ವಾರ್ಡ್ ಸಭೆಗಳಲ್ಲಿ ಮಾಹಿತಿಯನ್ನು ಪ್ರಚುರ ಪಡಿಸಲು ಹಾಗೂ ಅರ್ಜಿ ಸಲ್ಲಿಸುವ ವಿಧಾನದ ಕುರಿತು ಮಾಹಿತಿಯನ್ನು ಗ್ರಾ.ಪಂ ಅಭಿವೃದ್ಧಿ ಅಧಿಕಾರಿಗಳು ಸಾರ್ವಜನಿಕರಿಗೆ ನೀಡಲು ತಿಳಿಸಿದರು.

ಈ ಸಂದರ್ಭದಲ್ಲಿ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ್ ಬಿ ಕಂದಕೂರ್, ಸಹಾಯಕ ನಿರ್ದೇಶಕರಾದ (ಪಂ.ರಾ) ವೀರಣ್ಣ ನಕ್ರಳ್ಳಿ, ತಾಲೂಕು ಯೋಜನಾಧಿಕಾರಿ ಕೆ.ರಾಜಶೇಖರ್, ತಾ.ಪಂ ವಿಷಯ ನಿರ್ವಾಹಕರಾದ ಯಂಕೋಬ, ಕೆ.ಪವನ್ ಕುಮಾರ್ ಸೇರಿದಂತೆ ಎಲ್ಲಾ ಗ್ರಾ.ಪಂ ಅಭಿವೃಧ್ದಿ ಅಧಿಕಾರಿಗಳು, ಕಾರ್ಯದರ್ಶಿಗಳು ಹಾಜರಿದ್ದರು.

Leave a Reply

Your email address will not be published. Required fields are marked *