ಹೊಸಪೇಟೆ (ವಿಜಯನಗರ) : ಹೊಸಪೇಟೆಯ ಗೌರವಾನ್ವಿತ 3ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಅಧ್ಯಕ್ಷತೆಯಲ್ಲಿ ಜೂನ್ 7ರಂದು ಸಂಜೆ 4.30ಕ್ಕೆ ತಾಲೂಕು ಕಾನೂನು ಸೇವಾ ಸಮಿತಿ ತ್ರೈ ಮಾಸಿಕ ಸಭೆಯು ಹೊಸಪೇಟೆಯ 3ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆವರಣದಲ್ಲಿ ನಡೆಯಲಿದೆ.
ಸಭೆಯಲ್ಲಿ ಜುಲೈ 13 ರಂದು ನಡೆಯಲಿರುವ ರಾಷ್ಟಿçÃಯ ಲೋಕ ಅದಾಲತ್ ಪ್ರಕರಣಗಳ ಬಗ್ಗೆ, ತಾಲೂಕು ಕಾನೂನು ಸೇವಾ ಸಮಿತಿ ಹೊಸಪೇಟೆ ವತಿಯಿಂದ ಜೂನ್, ಜುಲೈ ಮತ್ತು ಅಗಸ್ಟ್ ತಿಂಗಳಿನಲ್ಲಿ ನಡೆಯಲಿರುವ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮಗಳ ಬಗ್ಗೆ, ಮಧ್ಯಸ್ಥಿಕೆಗಾರರ ಪ್ರಕರಣಗಳು ಮತ್ತು ಪ್ಯಾನಲ್ ವಕೀಲರುಗಳ ಕಾರ್ಯವೈಖರಿಗಳ ಬಗ್ಗೆ ಮತ್ತು ಇತರೆ ವಿಷಯಗಳ ಬಗ್ಗೆ ಚರ್ಚಿಸಲಾಗುವುದು ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ತಾಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.