ಜನಸ್ಪಂದನಾ ಕಾರ್ಯಕ್ರಮ: ತಾಲೂಕುವಾರು ವೇಳಾಪಟ್ಟಿ ಪ್ರಕಟ

Loading

ಹೊಸಪೇಟೆ (ವಿಜಯನಗರ) : ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಸೂಚನೆಯಂತೆ ವಿಜಯನಗರದ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಜಂಟಿಯಾಗಿ ತಾಲೂಕು ಮಟ್ಟದಲ್ಲಿ ನಡೆಸುವ ವಿಜಯನಗರ ಜಿಲ್ಲೆಯ ತಾಲೂಕುಮಟ್ಟದ ಜನಸ್ಪಂದನಾ ಕಾರ್ಯಕ್ರಮದ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.


ಜೂನ್ 21ರಂದು ಬೆಳಿಗ್ಗೆ 11 ಗಂಟೆಗೆ ಹೂವಿನಹಡಗಲಿ ತಾಲೂಕಿನ ಪ್ರವಾಸಿ ಮಂದಿರದಲ್ಲಿ, ಜೂನ್ 24ರಂದು ಬೆಳಿಗ್ಗೆ 11 ಗಂಟೆಗೆ ಹರಪನಹಳ್ಳಿ ತಾಲೂಕಿನ ಪ್ರವಾಸಿ ಮಂದಿರದಲ್ಲಿ, ಜೂನ್ 26 ರಂದು ಬೆಳಿಗ್ಗೆ 11 ಗಂಟೆಗೆ ಕೂಡ್ಲಿಗಿ ತಾಲೂಕಿನ ಪ್ರವಾಸಿ ಮಂದಿರದಲ್ಲಿ, ಜೂನ್ 29ರಂದು ಬೆಳಿಗ್ಗೆ 11 ಗಂಟೆಗೆ ಹಗರಿಬೊಮ್ಮನಹಳ್ಳಿ ತಾಲೂಕಿನ ತಾಲೂಕು ಆಫೀಸ್ ಆವರಣದಲ್ಲಿ, ಜುಲೈ 2ರಂದು ಬೆಳಿಗ್ಗೆ 11 ಗಂಟೆಗೆ ಹೊಸಪೇಟೆಯ ಒಳಾಂಗಣ ಕ್ರೀಡಾಂಗಣದಲ್ಲಿ ಹಾಗೂ ಜುಲೈ 5ರಂದು ಬೆಳಿಗ್ಗೆ 11 ಗಂಟೆಗೆ ಕೊಟ್ಟೂರು ತಾಲೂಕು ಕ್ರೀಡಾಂಗಣ ಆವರಣದ ಹೆಚ್.ಜಿ.ರಾಜ್ ಸಭಾಭವನದಲ್ಲಿ ತಾಲೂಕುಮಟ್ಟದ ಜನಸ್ಪಂದನಾ ಕಾರ್ಯಕ್ರಮಗಳು ನಡೆಯಲಿವೆ.


ಈ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸರ್ಕಾರದ ನಿರ್ದೇಶನದಂತೆ ಜಿಲ್ಲೆಯ ಎಲ್ಲಾ ಜಿಲ್ಲಾಮಟ್ಟದ ಅಧಿಕಾರಿಗಳು ತಪ್ಪದೇ ಹಾಜರಾಗಲು ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದ್ದಾರೆ. ಜಿಲ್ಲೆಯ ಎಲ್ಲಾ ಜಿಲ್ಲಾಮಟ್ಟದ ಅಧಿಕಾರಿಗಳ ಉಪಸ್ಥಿತಿಯಲ್ಲಿ ನಡೆಯುವ ಈ ಜನಸ್ಪಂದನ ಕಾರ್ಯಕ್ರಮದಲ್ಲಿ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಬಹುದಾಗಿದೆ ಎಂದು ವಿಜಯನಗರದ ಜಿಲ್ಲಾಧಿಕಾರಿಗಳಾದ ಎಂ.ಎಸ್. ದಿವಾಕರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *