ಹೊಸಪೇಟೆ (ವಿಜಯನಗರ) : ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಮತ್ತು ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ ಬೆಂಗಳೂರು, ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್), ವಿಜಯನಗರ ಇವರ ಸಂಯುಕ್ತಾಶ್ರಯದಲ್ಲಿ ಸ್ವಯಂ ಉದ್ಯೋಗ ಪ್ರಾರಂಭಿಸುವ ನಿರುದ್ಯೋಗ ಯುವಕ ಯುವತಿಯರಿಗೆ ಮತ್ತು ಉಧ್ಯಮ ಆಕಾಂಕ್ಷಿಗಳಿಗೆ ಹತ್ತು ದಿನಗಳ ಉಧ್ಯಮಶೀಲತಾಭಿವೃದ್ಧಿ ತರಬೇತಿಗೆ ಅರ್ಜಿ ಅಹ್ವಾನಿಸಲಾಗಿದೆ.
ತರಬೇತಿಯಲ್ಲಿ ಸ್ವಂತ ಉಧ್ಯಮವನ್ನು ಸ್ಥಾಪಿಸಲು ಅನುಸರಿಸಬೇಕಾದ ಕ್ರಮಗಳು, ಸರ್ಕಾರದ ಸ್ವಂತ ಉದ್ಯೋಗದ ಯೋಜನೆಗಳು, ಬ್ಯಾಂಕಿನ ವ್ಯವಹಾರ, ಮಾರುಕಟ್ಟೆ ಸಮೀಕ್ಷೆ, ಯೋಜನಾ ವರದಿ ತಯಾರಿಕೆ, ಹಾಗೂ ಉಧ್ಯಮ ನಿರ್ವಹಣೆ, ಉಧ್ಯಮಶೀಲತೆ, ಉಧ್ಯಮ ಪ್ರಾರಂಭದ ಹಂತಗಳು, ಉಧ್ಯಮಗಳನ್ನು ಪ್ರಾರಂಭಿಸಲು ಸರ್ಕಾರದ ಯೋಜನೆಗಳು, ಸಾಲ ಸೌಲಭ್ಯಗಳು, ಬ್ಯಾಂಕ್ ಬಗ್ಗೆ, ಜಾಹಿರಾತು ಮತ್ತು ಮಾರುಕಟ್ಟೆಯ ಕುರಿತು ನೊಂದಣಿ ಮಾಡುವ ವಿಧಾನಗಳು, ಯಶಸ್ವಿ ಉದ್ಯಮಿಗಳ ಜೊತೆ ಸಂವಾದ, ಉದ್ಯಮ ನಿರ್ವಹಣೆ ಮಾಡುವ ವಿಧಾನಗಳು ಮತ್ತು ಇತ್ಯಾದಿ ವಿಷಯಗಳ ಕುರಿತು ತರಬೇತಿಯನ್ನು ನೀಡಲಾಗುವುದು. ಈ ಪ್ರಯುಕ್ತ ವಿಜಯನಗರ ಜಿಲ್ಲೆಯ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅಭ್ಯರ್ಥಿಗಳು 18 ವರ್ಷದಿಂದ 45 ವರ್ಷದೊಳಗಿರಬೇಕು. ಹಾಗೂ ಎಸ್.ಎಸ್.ಎಲ್.ಸಿ ಪಾಸಾಗಿರಬೇಕು.
ಅರ್ಜಿ ಸಲ್ಲಿಸಲು ಜೂನ್ 20 ಕೊನೆಯ ದಿನವಾಗಿದೆ. ಆಸಕ್ತರು, ಅರ್ಜಿಯನ್ನು ಕರೆ ಮಾಡುವುದರ ಮೂಲಕ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ 6362681190, 7204016012 ಈ ನಂಬರಿಗೆ ಸಂಪರ್ಕಿಸಬಹುದಾಗಿದೆ ಎಂದು ಜಂಟಿ ನಿರ್ದೇಶಕರು, ಸಿಡಾಕ್ ವಿಜಯನಗರ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.