ವಿಜಯನಗರ ಜಿಲ್ಲೆಯಲ್ಲಿ ಮುಖ್ಯಮಂತ್ರಿಗಳ ಪ್ರವಾಸ

Loading

ಹೊಸಪೇಟೆ (ವಿಜಯನಗರ) : ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಜೂನ್ 21ರಂದು ವಿಜಯನಗರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.

ಜೂನ್ 21ರಂದು ಬೆಳಗ್ಗೆ 10 ಗಂಟೆಗೆ ಬಳ್ಳಾರಿ ಜಿಲ್ಲೆಯ ತೋರಣಗಲ್‌ನಿಂದ ನಿರ್ಗಮಿಸಿ ರಸ್ತೆಯ ಮೂಲಕ ಬೆಳಗ್ಗೆ 10.25ಕ್ಕೆ ಹೊಸಪೇಟೆಗೆ ಆಗಮಿಸುವರು. ಬಳಿಕ ಬೆಳಗ್ಗೆ 11 ಗಂಟೆಗೆ ಜಿಲ್ಲಾಡಳಿತ ಭವನದಲ್ಲಿನ ಆಡಿಟೋರಿಯಂ ಹಾಲ್‌ನಲ್ಲಿ ವಿಜಯನಗರ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ನಡೆಸುವರು. ಸಂಜೆ 4 ಗಂಟೆಗೆ ಹೊಸಪೇಟೆಯಿಂದ ನಿರ್ಗಮಿಸಿ ಬಳಿಕ ಜಿಂದಾಲ್ ಏರ್‌ಸ್ಟಿçಪ್‌ಗೆ ತೆರಳಿ ಅಲ್ಲಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *